Homeಕರೋನಾ ತಲ್ಲಣಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಮಾನಸಿಕ ಗೊಂದಲವೂ ಕೊರೊನಾದ ಪ್ರಾಥಮಿಕ ಲಕ್ಷಣವಾಗಿರಬಹುದು!- ಅಧ್ಯಯನ

ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ

- Advertisement -
- Advertisement -

ಜ್ವರದೊಂದಿಗೆ ತೀವ್ರವಾದ ಮಾನಸಿಕ ಗೊಂದಲದ ಸ್ಥಿತಿಯ ಸನ್ನಿವೇಶವು ಕೊರೊನಾದ ಆರಂಭಿಕ ಲಕ್ಷಣವಾಗಿರಬಹುದು ಎಂದು ಹೊಸ ಸಂಶೋಧನೆಗಳ ಫಲಿತಾಂಶಗಳು ತೋರಿಸಿಕೊಟ್ಟಿವೆ.

ಡೆಲಿರಿಯಮ್ ಮೆದುಳಿನಲ್ಲಿ ಹಠಾತ್ ಬದಲಾವಣೆಯಾಗಿ, ಅದು ಮಾನಸಿಕ ಗೊಂದಲ ಮತ್ತು ಭಾವನಾತ್ಮಕತೆಗೆ ಅಡ್ಡಿ ಉಂಟುಮಾಡುತ್ತದೆ. ಇದರಿಂದ ಯೋಚಿಸುವುದು, ನೆನಪಿಟ್ಟುಕೊಳ್ಳುವುದು, ನಿದ್ರೆ ಮಾಡುವುದು, ಗಮನ ಕೇಂದ್ರೀಕರಿಸುವುದು ಮತ್ತು ಇನ್ನೂ ಹೆಚ್ಚಿನ ಕೆಲಸಗಳನ್ನು ಕಷ್ಟಕರವಾಗಿಸುತ್ತದೆ ಎಂದು ನ್ಯಾಷನಲ್ ಹೆರಾಲ್ಡ್‌ ವರದಿ ಮಾಡಿದೆ.

ಜರ್ನಲ್ ಆಫ್ ಕ್ಲಿನಿಕಲ್ ಇಮ್ಯುನೊಲಾಜಿ ಮತ್ತು ಇಮ್ಯುನೊಥೆರಪಿಯಲ್ಲಿ ಪ್ರಕಟವಾದ ಈ ಅಧ್ಯಯನದ ವರದಿಯು, ಕೆಮ್ಮು ಮತ್ತು ಉಸಿರಾಟದ ತೊಂದರೆಗಳು ಕಾಣಿಸಿಕೊಳ್ಳುವದಕ್ಕಿಂತ ಮುಂಚಿನ ದಿನಗಳಲ್ಲಿ ಉಂಟಾಗುವ ರುಚಿ, ವಾಸನೆ ಹಾಗೂ ತಲೆನೋವಿನೊಂದಿಗೆ ಇಂತಹ ಸನ್ನಿವೇಶಗಳನ್ನು ಎದುರಿಸಿರುತ್ತಾರೆ ಎಂದು ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ಬಂಧನ ಯಾಕಿಲ್ಲ?- ರಾಜ್ಯವನ್ನು ತರಾಟೆ ಪಡೆದ ಹೈಕೋರ್ಟ್

“ಹೆಚ್ಚಿನ ಜ್ವರದಿಂದ ಬಳಲುತ್ತಿರುವಾಗ, ವಿಶೇಷವಾಗಿ ವಯಸ್ಸಾದ ರೋಗಿಗಳ ವಿಷಯದಲ್ಲಿ ಈ ರೀತಿಯ ಗೊಂದಲದ ಅಭಿವ್ಯಕ್ತಿಯನ್ನು ರೋಗದ ಆರಂಭಿಕ ಗುರುತು ಎಂದು ಪರಿಗಣಿಸಬೇಕು. ವಿಶೇಷವಾಗಿ ಈ ರೀತಿಯ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ನಾವು ಜಾಗರೂಕರಾಗಿರಬೇಕು. ಏಕೆಂದರೆ ಒಬ್ಬ ವ್ಯಕ್ತಿಯು ಕೆಲವು ಗೊಂದಲಗಳ ಚಿಹ್ನೆಗಳನ್ನು ಪ್ರಸ್ತುತಪಡಿಸುವುದರಿಂದ ಅವು ಸೋಂಕಿನ ಸೂಚನೆಯಾಗಿರಬಹುದು” ಎಂದು ಯೂನಿವರ್ಸಿಟಾಟ್ ಒಬೆರ್ಟಾ ಡಿ ಕ್ಯಾಟಲುನ್ಯಾ (ಯುಒಸಿ) ಅಧ್ಯಯನ ಸಂಶೋಧಕ ಜೇವಿಯರ್ ಕೊರಿಯಾ ಹೇಳಿದ್ದಾರೆ.

ಸಂಶೋಧನಾ ತಂಡವು ಕೇಂದ್ರ ನರಮಂಡಲಕ್ಕೆ ಸಂಬಂಧಿಸಿದಂತೆ ಕೊರೊನಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿದೆ.

ಚೀನಾದಲ್ಲಿ ನ್ಯುಮೋನಿಯಾದ ಮೊದಲ ಪ್ರಕರಣಗಳು ಶ್ವಾಸಕೋಶ ಮತ್ತು ಮೂತ್ರಪಿಂಡಗಳು ಹಾಗೂ ಹೃದಯದಂತಹ ಇತರ ಅಂಗಗಳಿಗೆ ಉಂಟಾಗುವ ಹಾನಿಯ ಮೇಲೆ ಕೇಂದ್ರೀಕರಿಸಿದರೂ, ಕೊರೊನಾ ವೈರಸ್ ಕೇಂದ್ರ ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ ಎಂಬ ಸೂಚನೆಗಳು ಹೆಚ್ಚುತ್ತಿವೆ ಎಂದು ಕಂಡುಹಿಡಿಯಲಾಗಿದೆ.


ಇದನ್ನೂ ಓದಿ: ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...