Homeಕರ್ನಾಟಕಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

ಸುಳ್ಳು ಆರೋಪ ಮಾಡಿ ಮಾನಸಿಕ ಕಿರುಕುಳ; ಸಿಯುಕೆ ವಿರುದ್ಧ ಉಪಹಾಸ ಸತ್ಯಾಗ್ರಹ ನಡೆಸಿದ್ದ ವಿದ್ಯಾರ್ಥಿ ಅಸ್ವಸ್ಥ

- Advertisement -
- Advertisement -

ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿನಾಕಾರಣ ಸುಳ್ಳು ಆರೋಪ ಮಾಡಿದ್ದು, ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಬುಧವಾರ(ಏ.12)ದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಿವಿಯ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ.

ಕೇಂದ್ರೀಯ ವಿಶ್ವ ವಿದ್ಯಾಲಯದ ಸಂಶೋಧನಾ ವಿಭಾಗದ ವಿದ್ಯಾರ್ಥಿ ನಂದಪ್ಪ ತನ್ನ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳು ಮತ್ತು ವಿಚಾರಣೆ ಹೆಸರಲ್ಲಿ ನೀಡುತ್ತಿರುವ ಮಾನಸಿಕ ಕಿರುಕುಳ ನಿಲ್ಲಿಸಬೇಕೆಂದು ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿ ನಂದಪ್ಪನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಾಮಾಜಿಕ ಹೋರಾಟಗಾರ ನಟ ಚೇತನ್ ಅಹಿಂಸಾ ಅವರು ಸಂಶೋಧನಾ ವಿದ್ಯಾರ್ಥಿಯನ್ನು ಇಂದು ಭೇಟಿಯಾಗಿದ್ದು, ಆ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ. ”ವಿಶ್ವವಿದ್ಯಾನಿಲಯದ ಪ್ರಾಬಲ್ಯದ ಶಕ್ತಿಗಳಿಂದ ಅವರು ಮತ್ತು ಬಹುಜನ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಕಿರುಕುಳವನ್ನು ವಿರೋಧಿಸಿ 5 ದಿನಗಳ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವಿದ್ಯಾರ್ಥಿ ಹೋರಾಟಗಾರ ನಂದ ಕುಮಾರ್ ಅವರನ್ನು ನಾನು ಇಂದು ಕಲ್ಬುರ್ಗಿಯಲ್ಲಿ ಭೇಟಿಯಾದೆ. ನಂದ ಕುಮಾರ್ ಅವರ ಪಕ್ಕದಲ್ಲಿ ಬಾಬಾಸಾಹೇಬ್ ಮತ್ತು ಬಸವನ ಪುಸ್ತಕಗಳಿದ್ದವು – ಸತ್ಯವು ಮೇಲುಗೈ ಸಾಧಿಸುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿಶ್ವವಿದ್ಯಾಲಯವು ಸುಳ್ಳು ಆರೋಪ ಮಾಡಿದ್ದು, ಪ್ರಕರಣ ದಾಖಲಿಸಿದೆ. ಅಷ್ಟೇ ಅಲ್ಲದೆ ಅನಾವಶ್ಯಕವಾಗಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಇದರಿಂದ ವೈಯಕ್ತಿಕ ಕಾರಣಗಳಿಗೆ ಹೊರಗೆ ಓಡಾಡುವಾಗ ಅನಗತ್ಯವಾಗಿ ತೊಂದರೆ ಆಗುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿಯ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಕೆಲವು ದಿನಗಳಿಂದ ಎಬಿವಿ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳಿಂದ ನನಗೆ ಹಿಂಸೆಯಾಗಿದೆ. ನನ್ನ ಜೊತೆ ಇನ್ನು ಇಬ್ಬರು ಸ್ನೇಹಿತರ ಮೇಲೂ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿಯ ಸಾವಿಗೆ ಜಾತಿ ತಾರತಮ್ಯ ಕಾರಣವಲ್ಲ; ವಿಚಾರಣಾ ಸಮಿತಿ ವರದಿ

ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ನನ್ನ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದಲ್ಲದೆ, ‘ಹೊರಗೆ ಸಿಗು ನೋಡಿಕೊಳ್ಳುತ್ತೇವೆ’ ಎಂದು ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯೂ ಅವರ ಪರವಾಗಿಯೇ ಇದೆ. ಆಡಳಿತ ಮಂಡಳಿಗೆ ನಾನೂ ಕೂಡ ದೂರು ನೀಡಿದ್ದು, ಕೆಲವು ಸಂಘಟನೆಗಳವರು ಅನಾವಶ್ಯಕವಾಗಿ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಮೇಲಿನ ಆರೋಪಗಳು ಸುಳ್ಳು. ವಿಚಾರಣೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನನಗೆ ನ್ಯಾಯ ದೊರೆಯುವವರೆಗೂ ಉಪವಾಸ ಸತ್ಯಾಗ್ರಹ ಮಾಡುತ್ತೇನೆಂದು ಈ ಮೊದಲೇ ತಿಳಿಸಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

”ಸಂಶೋಧನಾ ವಿದ್ಯಾರ್ಥಿ ನರೇಂದ್ರ ಕುಮಾರ್‌ ಸುಳ್ಳು ಆರೋಪ ಮಾಡಿ ನನ್ನ ವಿರುದ್ಧ ದೂರು ಸಲ್ಲಿಸಿದ್ದರು. ಶಿಸ್ತುಪಾಲನಾ ಸಮಿತಿಯು ವಿಚಾರಣೆಯ ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಅನುಪಸ್ಥಿತಿಯಲ್ಲಿ ಅಸಂಬದ್ಧ ಪ್ರಶ್ನೆಗಳನ್ನು ಕೇಳಿ ಗಂಟೆಗಟ್ಟಲೆ ವಿಚಾರಣೆ ನಡೆಸಿತು” ಎಂದು ಹೇಳಿದ್ದಾರೆ.

”ಶಿಸ್ತುಪಾಲನಾ ಅಧಿಕಾರಿಗಳು ವಿಚಾರಣೆ ವೇಳೆ, ದೂರಿಗೆ ಸಂಬಂಧಿತ ವಿಷಯಗಳನ್ನು ಕೇಳುವ ಹೊರತಾಗಿ ವೈಯಕ್ತಿಕ ವಿಚಾರಗಳ ಬಗ್ಗೆ ಕೇಳುತ್ತಾರೆ. ‘ನೀನು ಬೇರೆ ರಾಜ್ಯದವನಂತೆ ಕಾಣುತ್ತೀಯ, ದನದ ಮಾಂಸ ತಿನ್ನುತ್ತೀಯ. ಅದನ್ನು ಎಲ್ಲಿಂದ ತರ್ತೀರಾ’ ಎಂದು ನಿಂದಿಸುತ್ತಾರೆ. ಅನಗತ್ಯವಾಗಿ ಮಾನಸಿಕ ಹಿಂಸೆ ಕೊಡುತ್ತಿದ್ದಾರೆ” ಎಂದು ನೋವು ತೋಡಿಕೊಂಡಿದ್ದಾರೆ.

”ವಿಶ್ವವಿದ್ಯಾಲಯದ ಕ್ಯಾಂಪಸ್ ಆವರಣ ಗಿಡ-ಮರಗಳಿಗೆ ಈಚೆಗೆ ಬೆಂಕಿ ತಗುಲಿತ್ತು. ಅದರ ಆರೋಪವನ್ನು ನನ್ನ ಮೇಲೆ ಹೊರಿಸಲಾಗಿದೆ. ಕಿರುಕುಳ ಕೊಟ್ಟು ಮಾನಸಿಕ ಒತ್ತಡ ನೀಡಲಾಗುತ್ತಿದೆ. ಇದರಿಂದಾಗಿ ಸಂಶೋಧನ ಕಾರ್ಯಗಳಿಗೂ ತೊಂದರೆ ಆಗುತ್ತಿದೆ. ಇದನ್ನು ಇಲ್ಲಿಗೆ ನಿಲ್ಲಿಸಬೇಕು. ಇಲ್ಲದಿದ್ದರೆ ಕಾನೂನಿನ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...