Homeಕರ್ನಾಟಕಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ

ಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ

- Advertisement -
- Advertisement -

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲರನ್ನೂ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆಯೊಂದು ವರದಿಯಾಗಿದೆ. ನಿತ್ಯ ಸಾವಿರಾರು ಜನರ ಜೀವ ರಕ್ಷಿಸುವ ಪ್ರಮುಖ ಆಸ್ಪತ್ರೆಯಲ್ಲಿಯೇ ಮಹಿಳೆ ಮೇಲೆ ಘೋರ ಅತ್ಯಾಚಾರ ನಡೆದಿದೆ. ಹೌದು ಮೈಸೂರಿನ ಹೃದಯ ಭಾಗದಲ್ಲಿರುವ ಮೈಸೂರು ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಜನರ ಜೀವನಾಡಿಯಾಗಿರುವ ಕೆ.ಆರ್‌. ಆಸ್ಪತ್ರೆಯಲ್ಲಿ ಇಂತದ್ದೊಂದು ಹೇಯ ಕೃತ್ಯ ನಡೆದಿದೆ.

 ಆಸ್ಪತ್ರೆಯ ಕಟ್ಟಡದೊಳಗಡೆಯಲ್ಲಿಯೇ ಮಾನಸಿಕ ಚಿಕಿತ್ಸೆಗೆಂದು ದಾಖಲಾದ ಮಹಿಳಾ ರೋಗಿಯ ಮೇಲೆ  ಅತ್ಯಾಚಾರ ನಡೆದಿದೆ. ವಾರಗಳ ಹಿಂದೆಯೇ ಒಂದು ರಾತ್ರಿಯ ವೇಳೆ ಈ ಪೈಶಾಚಿಕ ಕೃತ್ಯ ನಡೆದಿದ್ದು ಈ ಬಗ್ಗೆ ವೃದ್ಧೆಯೊಬ್ಬರು ಮಾಹಿತಿ ನೀಡಿದರೂ ಆಸ್ಪತ್ರೆಯ ವೈದ್ಯರು ಕ್ರಮ ಕೈಗೊಂಡಿಲ್ಲ. ವಾರಗಳ ನಂತರ ಪ್ರಕರಣ ಬಯಲಿಗೆ ಬಂದಿದ್ದು ಆಸ್ಪತ್ರೆ ವೈದ್ಯರು ಮತ್ತು ಆಡಳಿತ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿತೇ ಎಂಬ ಅನುಮಾನ ಹುಟ್ಟಿಕೊಂಡಿದೆ.

30 ವರ್ಷದ ಮಹಿಳೆ ಮೇಲೆ ಈ ಅಮಾನುಷ ಕೃತ್ಯ ನಡೆದಿದ್ದು ರಾತ್ರಿ ವೇಳೆ ಆಸ್ಪತ್ರೆಯ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಒಳನುಗ್ಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಜೊತೆ ಅದೇ ವಾರ್ಡ್‌ನಲ್ಲಿದ್ದ ಮಹಿಳೆಯೊಬ್ಬರು  ಘಟನೆಯ ಕುರಿತು ಮಾನವ ಹಕ್ಕುಗಳ ಸೇವಾ ಸಮಿತಿಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ಪಡೆದ ಸಮಿತಿ ಪ್ರಕರಣವನ್ನು ಬಯಲಿಗೆಳೆದಿದೆ. ಅತ್ಯಾಚಾರದ ಬಗ್ಗೆ ವೃದ್ಧೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದ್ದರು. ಆದರೆ, ಮಾಹಿತಿ ನೀಡಿದ ವೃದ್ಧೆಗೆ ಆಸ್ಪತ್ರೆ ಸಿಬ್ಬಂದಿ ಹಲ್ಲೆ ಮಾಡಿ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

ಆರೋಪಿ ಕಾಮುಕ ರಾತ್ರಿಯ ವೇಳೆ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗುತ್ತಿದ್ದ ಎಂದು ಅತ್ಯಾಚಾರದ ಬಗ್ಗೆ ವೃದ್ಧೆಯೊಬ್ಬರು ಮಾಹಿತಿ ನೀಡಿದರೂ ಆಸ್ಪತ್ರೆಯವರು ಕ್ರಮ ಕೈಗೊಂಡಿಲ್ಲ. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ‌.ಆರ್. ಆಸ್ಪತ್ರೆಯ ವೈದ್ಯರು ಯತ್ನಿಸುತ್ತಿದ್ದಾರೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಪ್ರಕರಣ ಬೆಳಕಿಗೆ ಬಂದಿದೆ.

ಅದೇ ವಾರ್ಡ್ ನ ವೃದ್ದೆಯಿಂದ ಈ ಕುಕೃತ್ಯ ಬಯಲಾಗಿದೆ. ವಾರ್ಡ್ ನಲ್ಲಿದ್ದ ವೃದ್ದೆ ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಆದರೆ ಮಾಹಿತಿ ನೀಡಿದ ವೃದ್ಧೆಯ ಮೇಲೆಯೇ ಹಲ್ಲೆ ಮಾಡಿ, ಬಾಯಿ ಬಿಡದಂತೆ ಆಸ್ಪತ್ರೆಯ ಸಿಬ್ಬಂದಿ ಬೆದರಿಕೆಯೊಡ್ಡಿದ್ದಾರೆ ಎಂದು ಮಾನವ ಹಕ್ಕು ಸೇವಾ ಸಮಿತಿ ಆರೋಪಿಸಿದೆ.

ಕೆ.ಆರ್.ಆಸ್ಪತ್ರೆ ಅಧಿಕಾರಿಗಳ ಹೇಳಿಕೆ ಏನು?:

ಆಕೆ ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವ ಮಹಿಳೆಯಾಗಿದ್ದಾಳೆ. ಸದ್ಯ ಪ್ರಾಥಮಿಕ ಪರೀಕ್ಷೆ ಮಾಡಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಅತ್ಯಾಚಾರದ ಬಗ್ಗೆ ಕಂಡುಬಂದಿಲ್ಲ. ಎಫ್.ಎಸ್.ಎಲ್ ವರದಿಗೆ ಕಳುಹಿಸಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಿಸಿಟಿವಿ ಪೋಟೆಜ್ ಅನ್ನು ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಸಿದ್ದ ಉತ್ತರವನ್ನು ಅವರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...