Homeಕರ್ನಾಟಕಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ

ಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ

- Advertisement -
- Advertisement -

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎಲ್ಲರನ್ನೂ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆಯೊಂದು ವರದಿಯಾಗಿದೆ. ನಿತ್ಯ ಸಾವಿರಾರು ಜನರ ಜೀವ ರಕ್ಷಿಸುವ ಪ್ರಮುಖ ಆಸ್ಪತ್ರೆಯಲ್ಲಿಯೇ ಮಹಿಳೆ ಮೇಲೆ ಘೋರ ಅತ್ಯಾಚಾರ ನಡೆದಿದೆ. ಹೌದು ಮೈಸೂರಿನ ಹೃದಯ ಭಾಗದಲ್ಲಿರುವ ಮೈಸೂರು ಮಾತ್ರವಲ್ಲದೇ ಸುತ್ತಮುತ್ತಲಿನ ಜಿಲ್ಲೆಗಳ ಜನರ ಜೀವನಾಡಿಯಾಗಿರುವ ಕೆ.ಆರ್‌. ಆಸ್ಪತ್ರೆಯಲ್ಲಿ ಇಂತದ್ದೊಂದು ಹೇಯ ಕೃತ್ಯ ನಡೆದಿದೆ.

 ಆಸ್ಪತ್ರೆಯ ಕಟ್ಟಡದೊಳಗಡೆಯಲ್ಲಿಯೇ ಮಾನಸಿಕ ಚಿಕಿತ್ಸೆಗೆಂದು ದಾಖಲಾದ ಮಹಿಳಾ ರೋಗಿಯ ಮೇಲೆ  ಅತ್ಯಾಚಾರ ನಡೆದಿದೆ. ವಾರಗಳ ಹಿಂದೆಯೇ ಒಂದು ರಾತ್ರಿಯ ವೇಳೆ ಈ ಪೈಶಾಚಿಕ ಕೃತ್ಯ ನಡೆದಿದ್ದು ಈ ಬಗ್ಗೆ ವೃದ್ಧೆಯೊಬ್ಬರು ಮಾಹಿತಿ ನೀಡಿದರೂ ಆಸ್ಪತ್ರೆಯ ವೈದ್ಯರು ಕ್ರಮ ಕೈಗೊಂಡಿಲ್ಲ. ವಾರಗಳ ನಂತರ ಪ್ರಕರಣ ಬಯಲಿಗೆ ಬಂದಿದ್ದು ಆಸ್ಪತ್ರೆ ವೈದ್ಯರು ಮತ್ತು ಆಡಳಿತ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿತೇ ಎಂಬ ಅನುಮಾನ ಹುಟ್ಟಿಕೊಂಡಿದೆ.

30 ವರ್ಷದ ಮಹಿಳೆ ಮೇಲೆ ಈ ಅಮಾನುಷ ಕೃತ್ಯ ನಡೆದಿದ್ದು ರಾತ್ರಿ ವೇಳೆ ಆಸ್ಪತ್ರೆಯ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಒಳನುಗ್ಗಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಲಾಗುತ್ತಿದೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಜೊತೆ ಅದೇ ವಾರ್ಡ್‌ನಲ್ಲಿದ್ದ ಮಹಿಳೆಯೊಬ್ಬರು  ಘಟನೆಯ ಕುರಿತು ಮಾನವ ಹಕ್ಕುಗಳ ಸೇವಾ ಸಮಿತಿಗೆ ಮಾಹಿತಿ ನೀಡಿದ್ದಾರೆ. ಆ ಮಾಹಿತಿಯನ್ನು ಪಡೆದ ಸಮಿತಿ ಪ್ರಕರಣವನ್ನು ಬಯಲಿಗೆಳೆದಿದೆ. ಅತ್ಯಾಚಾರದ ಬಗ್ಗೆ ವೃದ್ಧೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದ್ದರು. ಆದರೆ, ಮಾಹಿತಿ ನೀಡಿದ ವೃದ್ಧೆಗೆ ಆಸ್ಪತ್ರೆ ಸಿಬ್ಬಂದಿ ಹಲ್ಲೆ ಮಾಡಿ ಬಾಯಿ ಬಿಡದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ : ಎಐಎಡಿಎಂಕೆ ಮಾಜಿ ಸಚಿವ ಎಂ.ಮಣಿಕಂಠನ್‌ಗೆ ಷರತ್ತು ಬದ್ಧ ಜಾಮೀನು

ಆರೋಪಿ ಕಾಮುಕ ರಾತ್ರಿಯ ವೇಳೆ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗುತ್ತಿದ್ದ ಎಂದು ಅತ್ಯಾಚಾರದ ಬಗ್ಗೆ ವೃದ್ಧೆಯೊಬ್ಬರು ಮಾಹಿತಿ ನೀಡಿದರೂ ಆಸ್ಪತ್ರೆಯವರು ಕ್ರಮ ಕೈಗೊಂಡಿಲ್ಲ. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ‌.ಆರ್. ಆಸ್ಪತ್ರೆಯ ವೈದ್ಯರು ಯತ್ನಿಸುತ್ತಿದ್ದಾರೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಪ್ರಕರಣ ಬೆಳಕಿಗೆ ಬಂದಿದೆ.

ಅದೇ ವಾರ್ಡ್ ನ ವೃದ್ದೆಯಿಂದ ಈ ಕುಕೃತ್ಯ ಬಯಲಾಗಿದೆ. ವಾರ್ಡ್ ನಲ್ಲಿದ್ದ ವೃದ್ದೆ ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಆದರೆ ಮಾಹಿತಿ ನೀಡಿದ ವೃದ್ಧೆಯ ಮೇಲೆಯೇ ಹಲ್ಲೆ ಮಾಡಿ, ಬಾಯಿ ಬಿಡದಂತೆ ಆಸ್ಪತ್ರೆಯ ಸಿಬ್ಬಂದಿ ಬೆದರಿಕೆಯೊಡ್ಡಿದ್ದಾರೆ ಎಂದು ಮಾನವ ಹಕ್ಕು ಸೇವಾ ಸಮಿತಿ ಆರೋಪಿಸಿದೆ.

ಕೆ.ಆರ್.ಆಸ್ಪತ್ರೆ ಅಧಿಕಾರಿಗಳ ಹೇಳಿಕೆ ಏನು?:

ಆಕೆ ಮಾನಸಿಕ ಖಾಯಿಲೆಯಿಂದ ಬಳಲುತ್ತಿರುವ ಮಹಿಳೆಯಾಗಿದ್ದಾಳೆ. ಸದ್ಯ ಪ್ರಾಥಮಿಕ ಪರೀಕ್ಷೆ ಮಾಡಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಅತ್ಯಾಚಾರದ ಬಗ್ಗೆ ಕಂಡುಬಂದಿಲ್ಲ. ಎಫ್.ಎಸ್.ಎಲ್ ವರದಿಗೆ ಕಳುಹಿಸಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯುತ್ತಿದೆ. ಸಿಸಿಟಿವಿ ಪೋಟೆಜ್ ಅನ್ನು ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಸಿದ್ದ ಉತ್ತರವನ್ನು ಅವರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...