Homeಮುಖಪುಟಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ ಗ್ರಾಮದಲ್ಲಿ ಜನವರಿ 1ರಂದು ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಖಚಿತಪಡಿಸಿರುವುದಾಗಿ ಆಲ್ಟ್ ನ್ಯೂಸ್‌ ವರದಿ ಮಾಡಿದೆ.

ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಎರಡ್ಮೂರು ವಿಡಿಯೋಗಳು ವೈರಲ್ ಆಗಿವೆ. ನಮಗೆ ದೊರೆತ ಮೊದಲ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಕೊಳೆಯಾದ ಬಟ್ಟೆ ಧರಿಸಿ ರಸ್ತೆ ಬದಿಯ ಕಸದ ರಾಶಿಯ ಮುಂದೆ ಕುಳಿತಿದ್ದು, ಕಸದ ರಾಶಿಯಲ್ಲಿ ಸತ್ತ ಹಸುವಿನ ಕಳೇಬರದಂತಹ ವಸ್ತು ಇದೆ. ದುಷ್ಕರ್ಮಿಗಳ ಗುಂಪು ಆ ವ್ಯಕ್ತಿಯ ಬಳಿಗೆ ತೆರಳಿ ಪ್ರಶ್ನಿಸಲು ಪ್ರಾರಂಭಿಸುತ್ತಾರೆ. ಒಬ್ಬ ವ್ಯಕ್ತಿಯು “ಹಸು ನಮ್ಮ ತಾಯಿ” ಎಂದು ಹೇಳಲು ಒತ್ತಾಯಿಸುತ್ತಾನೆ. ಗುಂಪಿನಲ್ಲಿದ್ದ ಕೆಲವರು, “ಅವನು ಹೊರಗಿನವನು, ಇಲ್ಲಿಂದ ಬಂದವನಲ್ಲ” ಎಂದು ಹೇಳುತ್ತಾರೆ.

ನಮಗೆ ದೊರೆತ ಇನ್ನೊಂದು ವಿಡಿಯೋ ದುಷ್ಕರ್ಮಿಗಳು ಆ ವ್ಯಕ್ತಿಯನ್ನು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಎಳೆದೊಯ್ಯುವ, ಕ್ರೂರವಾಗಿ ಥಳಿಸುವ, ಕಾಲಿನಿಂದ ಒದಿಯುವ ಮತ್ತು ಆ ವ್ಯಕ್ತಿ ನೋವಿನಿಂದ ‘ಅಯ್ಯೋ ಅಪ್ಪ’ ಎಂದು ಚೀರಾಡುವ ದೃಶ್ಯವಿದೆ. ಈ ವೇಳೆ ಓರ್ವ ದುಷ್ಕರ್ಮಿ ‘ಆತ ಮುಸ್ಲಿಂ’ ಎಂದು ಹೇಳುವುದನ್ನು ಕೇಳಬಹುದು.

‘ಅಯ್ಯೋ ಅಪ್ಪ’ ಎಂದು ದಕ್ಷಿಣ ಭಾರತ ಭಾಷೆಗಳಲ್ಲಿ ಹೇಳುವ ಪದವಾಗಿದೆ. ಹಾಗಾಗಿ, ಹಲ್ಲೆಗೊಳಗಾದ ವ್ಯಕ್ತಿ ದಕ್ಷಿಣ ಭಾರತೀಯ ಆಗಿರಬಹುದು ಎಂದು ಅಲ್ಟ್ ನ್ಯೂಸ್ ಅಭಿಪ್ರಾಯಪಟ್ಟಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರನ್ನು ಸಂಪರ್ಕಿಸಿದ್ದೇವೆ. ಘಟನೆಯ ವಿಡಿಯೋ ದೊರೆತ ಬಳಿಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಹಸುವನ್ನು ಕೊಂದು, ಅದರ ಮಾಂಸ ಸೇವಿಸಿದ ಶಂಕೆಯ ಮೇಲೆ ಥಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ಅಲ್ಟ್ ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಜೊತೆ ಮಾತನಾಡಿದ ಅಕ್ಲೇರಾ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮರಾಮ್, ಬಲಿಪಶು ಮಾನಸಿಕ ಅಸ್ವಸ್ಥನಾಗಿದ್ದು, ಸತ್ತ ಹಸುವಿನ ಅವಶೇಷಗಳ ಬಳಿ ಕುಳಿತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. ಆತ ಒಬ್ಬ ಅಲೆಮಾರಿಯಾಗಿದ್ದು, ದಾಳಿಯ ನಂತರ ಸ್ಥಳದಿಂದ ಹೊರಟು ಹೋಗಿದ್ದಾರೆ. ಪೊಲೀಸರು ಇನ್ನೂ ಬಲಿಪಶುವನ್ನು ಪತ್ತೆಹಚ್ಚದಿದ್ದರೂ, ಹಲ್ಲೆ ನಡೆಸಿದವರನ್ನು ರಾಕೇಶ್, ರೋಹನ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ. ಅವರನ್ನು ಬಂಧಿಸಲಾಗಿದೆ ಎಂದು ಧರ್ಮರಾಮ್ ಮಾಹಿತಿ ನೀಡಿದ್ದಾರೆ.

ದೈನಿಕ್ ಭಾಸ್ಕರ್ ವರದಿಯು ಆರೋಪಿಗಳನ್ನು ರಾಕೇಶ್ ರಾವ್, ಅಜಯ್ ಪರೇಟಾ ಮತ್ತು ರೋಹನ್ ಸೇನ್ ಎಂದು ಹೆಸರಿಸಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಗ್ಗೆ ಹೆಚ್ಚಿನ ವಿವರ ತಿಳಿದುಕೊಳ್ಳಲು ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅವರು ಹಿಂದುತ್ವ ಸಂಘಟನೆ ಬಜರಂಗದಳದ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ತಮ್ಮನ್ನು ತಾವು ಗೋರಕ್ಷಕರು ಎಂದು ಹೇಳಿಕೊಂಡಿದ್ದಾರೆ ಎಂದು ಆಲ್ಟ್ ನ್ಯೂಸ್ ತಿಳಿಸಿದೆ.

ಈ ಕುರಿತ ವಿವರವಾದ ವರದಿಯನ್ನು ಇಲ್ಲಿ ಓದಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...