Homeಮುಖಪುಟಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ ಗ್ರಾಮದಲ್ಲಿ ಜನವರಿ 1ರಂದು ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಖಚಿತಪಡಿಸಿರುವುದಾಗಿ ಆಲ್ಟ್ ನ್ಯೂಸ್‌ ವರದಿ ಮಾಡಿದೆ.

ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಎರಡ್ಮೂರು ವಿಡಿಯೋಗಳು ವೈರಲ್ ಆಗಿವೆ. ನಮಗೆ ದೊರೆತ ಮೊದಲ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಕೊಳೆಯಾದ ಬಟ್ಟೆ ಧರಿಸಿ ರಸ್ತೆ ಬದಿಯ ಕಸದ ರಾಶಿಯ ಮುಂದೆ ಕುಳಿತಿದ್ದು, ಕಸದ ರಾಶಿಯಲ್ಲಿ ಸತ್ತ ಹಸುವಿನ ಕಳೇಬರದಂತಹ ವಸ್ತು ಇದೆ. ದುಷ್ಕರ್ಮಿಗಳ ಗುಂಪು ಆ ವ್ಯಕ್ತಿಯ ಬಳಿಗೆ ತೆರಳಿ ಪ್ರಶ್ನಿಸಲು ಪ್ರಾರಂಭಿಸುತ್ತಾರೆ. ಒಬ್ಬ ವ್ಯಕ್ತಿಯು “ಹಸು ನಮ್ಮ ತಾಯಿ” ಎಂದು ಹೇಳಲು ಒತ್ತಾಯಿಸುತ್ತಾನೆ. ಗುಂಪಿನಲ್ಲಿದ್ದ ಕೆಲವರು, “ಅವನು ಹೊರಗಿನವನು, ಇಲ್ಲಿಂದ ಬಂದವನಲ್ಲ” ಎಂದು ಹೇಳುತ್ತಾರೆ.

ನಮಗೆ ದೊರೆತ ಇನ್ನೊಂದು ವಿಡಿಯೋ ದುಷ್ಕರ್ಮಿಗಳು ಆ ವ್ಯಕ್ತಿಯನ್ನು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಎಳೆದೊಯ್ಯುವ, ಕ್ರೂರವಾಗಿ ಥಳಿಸುವ, ಕಾಲಿನಿಂದ ಒದಿಯುವ ಮತ್ತು ಆ ವ್ಯಕ್ತಿ ನೋವಿನಿಂದ ‘ಅಯ್ಯೋ ಅಪ್ಪ’ ಎಂದು ಚೀರಾಡುವ ದೃಶ್ಯವಿದೆ. ಈ ವೇಳೆ ಓರ್ವ ದುಷ್ಕರ್ಮಿ ‘ಆತ ಮುಸ್ಲಿಂ’ ಎಂದು ಹೇಳುವುದನ್ನು ಕೇಳಬಹುದು.

‘ಅಯ್ಯೋ ಅಪ್ಪ’ ಎಂದು ದಕ್ಷಿಣ ಭಾರತ ಭಾಷೆಗಳಲ್ಲಿ ಹೇಳುವ ಪದವಾಗಿದೆ. ಹಾಗಾಗಿ, ಹಲ್ಲೆಗೊಳಗಾದ ವ್ಯಕ್ತಿ ದಕ್ಷಿಣ ಭಾರತೀಯ ಆಗಿರಬಹುದು ಎಂದು ಅಲ್ಟ್ ನ್ಯೂಸ್ ಅಭಿಪ್ರಾಯಪಟ್ಟಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರನ್ನು ಸಂಪರ್ಕಿಸಿದ್ದೇವೆ. ಘಟನೆಯ ವಿಡಿಯೋ ದೊರೆತ ಬಳಿಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಹಸುವನ್ನು ಕೊಂದು, ಅದರ ಮಾಂಸ ಸೇವಿಸಿದ ಶಂಕೆಯ ಮೇಲೆ ಥಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ಅಲ್ಟ್ ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಜೊತೆ ಮಾತನಾಡಿದ ಅಕ್ಲೇರಾ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮರಾಮ್, ಬಲಿಪಶು ಮಾನಸಿಕ ಅಸ್ವಸ್ಥನಾಗಿದ್ದು, ಸತ್ತ ಹಸುವಿನ ಅವಶೇಷಗಳ ಬಳಿ ಕುಳಿತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. ಆತ ಒಬ್ಬ ಅಲೆಮಾರಿಯಾಗಿದ್ದು, ದಾಳಿಯ ನಂತರ ಸ್ಥಳದಿಂದ ಹೊರಟು ಹೋಗಿದ್ದಾರೆ. ಪೊಲೀಸರು ಇನ್ನೂ ಬಲಿಪಶುವನ್ನು ಪತ್ತೆಹಚ್ಚದಿದ್ದರೂ, ಹಲ್ಲೆ ನಡೆಸಿದವರನ್ನು ರಾಕೇಶ್, ರೋಹನ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ. ಅವರನ್ನು ಬಂಧಿಸಲಾಗಿದೆ ಎಂದು ಧರ್ಮರಾಮ್ ಮಾಹಿತಿ ನೀಡಿದ್ದಾರೆ.

ದೈನಿಕ್ ಭಾಸ್ಕರ್ ವರದಿಯು ಆರೋಪಿಗಳನ್ನು ರಾಕೇಶ್ ರಾವ್, ಅಜಯ್ ಪರೇಟಾ ಮತ್ತು ರೋಹನ್ ಸೇನ್ ಎಂದು ಹೆಸರಿಸಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಗ್ಗೆ ಹೆಚ್ಚಿನ ವಿವರ ತಿಳಿದುಕೊಳ್ಳಲು ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅವರು ಹಿಂದುತ್ವ ಸಂಘಟನೆ ಬಜರಂಗದಳದ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ತಮ್ಮನ್ನು ತಾವು ಗೋರಕ್ಷಕರು ಎಂದು ಹೇಳಿಕೊಂಡಿದ್ದಾರೆ ಎಂದು ಆಲ್ಟ್ ನ್ಯೂಸ್ ತಿಳಿಸಿದೆ.

ಈ ಕುರಿತ ವಿವರವಾದ ವರದಿಯನ್ನು ಇಲ್ಲಿ ಓದಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...