Homeಮುಖಪುಟಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

- Advertisement -
- Advertisement -

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ ಗ್ರಾಮದಲ್ಲಿ ಜನವರಿ 1ರಂದು ನಡೆದಿದೆ ಎಂದು ವರದಿಯಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಪೊಲೀಸರು ಖಚಿತಪಡಿಸಿರುವುದಾಗಿ ಆಲ್ಟ್ ನ್ಯೂಸ್‌ ವರದಿ ಮಾಡಿದೆ.

ಘಟನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಎರಡ್ಮೂರು ವಿಡಿಯೋಗಳು ವೈರಲ್ ಆಗಿವೆ. ನಮಗೆ ದೊರೆತ ಮೊದಲ ವಿಡಿಯೋದಲ್ಲಿ ಹಲ್ಲೆಗೊಳಗಾದ ವ್ಯಕ್ತಿ ಕೊಳೆಯಾದ ಬಟ್ಟೆ ಧರಿಸಿ ರಸ್ತೆ ಬದಿಯ ಕಸದ ರಾಶಿಯ ಮುಂದೆ ಕುಳಿತಿದ್ದು, ಕಸದ ರಾಶಿಯಲ್ಲಿ ಸತ್ತ ಹಸುವಿನ ಕಳೇಬರದಂತಹ ವಸ್ತು ಇದೆ. ದುಷ್ಕರ್ಮಿಗಳ ಗುಂಪು ಆ ವ್ಯಕ್ತಿಯ ಬಳಿಗೆ ತೆರಳಿ ಪ್ರಶ್ನಿಸಲು ಪ್ರಾರಂಭಿಸುತ್ತಾರೆ. ಒಬ್ಬ ವ್ಯಕ್ತಿಯು “ಹಸು ನಮ್ಮ ತಾಯಿ” ಎಂದು ಹೇಳಲು ಒತ್ತಾಯಿಸುತ್ತಾನೆ. ಗುಂಪಿನಲ್ಲಿದ್ದ ಕೆಲವರು, “ಅವನು ಹೊರಗಿನವನು, ಇಲ್ಲಿಂದ ಬಂದವನಲ್ಲ” ಎಂದು ಹೇಳುತ್ತಾರೆ.

ನಮಗೆ ದೊರೆತ ಇನ್ನೊಂದು ವಿಡಿಯೋ ದುಷ್ಕರ್ಮಿಗಳು ಆ ವ್ಯಕ್ತಿಯನ್ನು ರಸ್ತೆಯ ಒಂದು ಬದಿಯಿಂದ ಮತ್ತೊಂದು ಬದಿಗೆ ಎಳೆದೊಯ್ಯುವ, ಕ್ರೂರವಾಗಿ ಥಳಿಸುವ, ಕಾಲಿನಿಂದ ಒದಿಯುವ ಮತ್ತು ಆ ವ್ಯಕ್ತಿ ನೋವಿನಿಂದ ‘ಅಯ್ಯೋ ಅಪ್ಪ’ ಎಂದು ಚೀರಾಡುವ ದೃಶ್ಯವಿದೆ. ಈ ವೇಳೆ ಓರ್ವ ದುಷ್ಕರ್ಮಿ ‘ಆತ ಮುಸ್ಲಿಂ’ ಎಂದು ಹೇಳುವುದನ್ನು ಕೇಳಬಹುದು.

‘ಅಯ್ಯೋ ಅಪ್ಪ’ ಎಂದು ದಕ್ಷಿಣ ಭಾರತ ಭಾಷೆಗಳಲ್ಲಿ ಹೇಳುವ ಪದವಾಗಿದೆ. ಹಾಗಾಗಿ, ಹಲ್ಲೆಗೊಳಗಾದ ವ್ಯಕ್ತಿ ದಕ್ಷಿಣ ಭಾರತೀಯ ಆಗಿರಬಹುದು ಎಂದು ಅಲ್ಟ್ ನ್ಯೂಸ್ ಅಭಿಪ್ರಾಯಪಟ್ಟಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ನಾವು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಅವರನ್ನು ಸಂಪರ್ಕಿಸಿದ್ದೇವೆ. ಘಟನೆಯ ವಿಡಿಯೋ ದೊರೆತ ಬಳಿಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಹಸುವನ್ನು ಕೊಂದು, ಅದರ ಮಾಂಸ ಸೇವಿಸಿದ ಶಂಕೆಯ ಮೇಲೆ ಥಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ ಎಂದು ಅಲ್ಟ್ ನ್ಯೂಸ್ ವರದಿ ಮಾಡಿದೆ.

ಆಲ್ಟ್ ನ್ಯೂಸ್ ಜೊತೆ ಮಾತನಾಡಿದ ಅಕ್ಲೇರಾ ಪೊಲೀಸ್ ಇನ್ಸ್‌ಪೆಕ್ಟರ್ ಧರ್ಮರಾಮ್, ಬಲಿಪಶು ಮಾನಸಿಕ ಅಸ್ವಸ್ಥನಾಗಿದ್ದು, ಸತ್ತ ಹಸುವಿನ ಅವಶೇಷಗಳ ಬಳಿ ಕುಳಿತಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ. ಆತ ಒಬ್ಬ ಅಲೆಮಾರಿಯಾಗಿದ್ದು, ದಾಳಿಯ ನಂತರ ಸ್ಥಳದಿಂದ ಹೊರಟು ಹೋಗಿದ್ದಾರೆ. ಪೊಲೀಸರು ಇನ್ನೂ ಬಲಿಪಶುವನ್ನು ಪತ್ತೆಹಚ್ಚದಿದ್ದರೂ, ಹಲ್ಲೆ ನಡೆಸಿದವರನ್ನು ರಾಕೇಶ್, ರೋಹನ್ ಮತ್ತು ಅಜಯ್ ಎಂದು ಗುರುತಿಸಲಾಗಿದೆ. ಅವರನ್ನು ಬಂಧಿಸಲಾಗಿದೆ ಎಂದು ಧರ್ಮರಾಮ್ ಮಾಹಿತಿ ನೀಡಿದ್ದಾರೆ.

ದೈನಿಕ್ ಭಾಸ್ಕರ್ ವರದಿಯು ಆರೋಪಿಗಳನ್ನು ರಾಕೇಶ್ ರಾವ್, ಅಜಯ್ ಪರೇಟಾ ಮತ್ತು ರೋಹನ್ ಸೇನ್ ಎಂದು ಹೆಸರಿಸಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಗ್ಗೆ ಹೆಚ್ಚಿನ ವಿವರ ತಿಳಿದುಕೊಳ್ಳಲು ನಾವು ಅವರ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪರಿಶೀಲಿಸಿದ್ದೇವೆ. ಅವರು ಹಿಂದುತ್ವ ಸಂಘಟನೆ ಬಜರಂಗದಳದ ಜೊತೆ ಸಂಬಂಧ ಹೊಂದಿದ್ದಾರೆ ಮತ್ತು ತಮ್ಮನ್ನು ತಾವು ಗೋರಕ್ಷಕರು ಎಂದು ಹೇಳಿಕೊಂಡಿದ್ದಾರೆ ಎಂದು ಆಲ್ಟ್ ನ್ಯೂಸ್ ತಿಳಿಸಿದೆ.

ಈ ಕುರಿತ ವಿವರವಾದ ವರದಿಯನ್ನು ಇಲ್ಲಿ ಓದಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...