Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....