Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...