Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...