Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...