Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...