Homeಮುಖಪುಟಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

ಮೆಂಟರ್‌ ಹೆಚ್ಚಿನದ್ದೇನೂ ಮಾಡಲಾರರು; ಗವಾಸ್ಕರ್‌ ಉವಾಚ

- Advertisement -
- Advertisement -

“ಒಬ್ಬ ಮೆಂಟರ್‌ ಹೆಚ್ಚೆಂದರೆ ಸಹಾಯ ಮಾಡಬಹುದು, ಆದರೆ ಉತ್ತಮ ಪ್ರದರ್ಶನ ನೀಡಿ ಆಟಗಾರರೇ ನಿಜವಾದ ಟಾಸ್ಕ್‌ ಎದುರಿಸಬೇಕಾಗುತ್ತದೆ” ಎಂದು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್‌‌ ಹೇಳಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರನ್ನು ಟಿ-20 ವಿಶ್ವಕಪ್‌ ತಂಡದ ಮೆಂಟರ್‌ ಆಗಿ ನೇಮಕ ಮಾಡಿರುವ ಕುರಿತು ಆಜ್‌ತಕ್‌ ಮಾಧ್ಯಮದೊಂದಿಗೆ ಗವಾಸ್ಕರ್ ಹಂಚಿಕೊಂಡಿರುವ ಸಂಗತಿಗಳನ್ನು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ಟಿ-20 ವಿಶ್ವಕಪ್‌‌ ಸೂಪರ್‌ 12ರ ಹಂತದ ಪಂದ್ಯಾಟದಲ್ಲಿ ಪಾಕಿಸ್ತಾನದ ವಿರುದ್ಧ ಕೊಹ್ಲಿ ಪಡೆ ಸೆಣೆಸಾಡಲಿದೆ. “ಈ ರೂಪದ ಪಂದ್ಯಾವಳಿಯಲ್ಲಿ ಕೊಹ್ಲಿ ಪಡೆ ಸಂಪೂರ್ಣ ಮೆಚ್ಚಿನದ್ದು ಎಂದು ಹೇಳಲು ಸಾಧ್ಯವಿಲ್ಲ. ಮೆಂಟರ್‌ ಹೆಚ್ಚಿನದ್ದೇನೂ ಮಾಡಲೂ ಆಗದು” ಎಂದು ಗವಾಸ್ಕರ್‌‌ ಎಚ್ಚರಿಸಿದ್ದಾರೆ.

“ಹೌದು, ಡ್ರೆಸ್ಸಿಂಗ್‌ ರೂಮಿನಲ್ಲಿ ಈ ವೇಗದ ಆಟಕ್ಕೆ ತಯಾರಾಗಲು ಮೆಂಟರ್‌‌ ನಿಮಗೆ ಸಹಾಯ ಮಾಡಬಹುದು, ಅಗತ್ಯವಿದ್ದರೆ ತಂತ್ರಗಾರಿಕೆಯನ್ನು ಎಣೆಯಲು ಸಹಾಯ ಮಾಡಬಹುದು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಟೈಮ್‌ಔಟ್‌ ಸಮಯದಲ್ಲಿ ಬ್ಯಾಟ್‌ಮನ್‌ಗಳು ಮತ್ತು ಬೌಲರ್‌ಗಳೊಂದಿಗೆ ಅವರು (ಮೆಂಟರ್‌) ಮಾತನಾಡಬಹುದು, ಹೀಗಾಗಿ ಧೋನಿಯವರ ನೇಮಕ ಒಳ್ಳೆಯದ್ದಾಗಿದೆ. ಆದರೆ ಧೋನಿ ಡ್ರೆಸ್ಸಿಂಗ್‌ ರೂಮಿನಲ್ಲಿ ಇರುತ್ತಾರೆ. ಆಟಗಾರರು ಮೈದಾನದಲ್ಲಿ ನಿಜವಾದ ಕೆಲಸವನ್ನು ನಿರ್ವಹಿಸಬೇಕು. ಆಟಗಾರರು ಒತ್ತಡವನ್ನು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಫಲಿತಾಂಶ ನಿರ್ಧಾರವಾಗಲಿದೆ” ಎಂದು ಗವಾಸ್ಕರ್ ತಿಳಿಸಿದ್ದಾರೆ.

ಟಿ-20 ಮಾದರಿಯ ಕ್ರಿಕೆಟ್‌ ನಾಯಕತ್ವವನ್ನು ಬಿಡುವುದಾಗಿ ವಿರಾಟ್‌ ಕೊಹ್ಲಿ ಘೋಷಿಸಿರುವುದರಿಂದ ಅವರ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿರುವ ಸುನಿಲ್‌ ಗವಾಸ್ಕರ್‌‌, “ನೀವು ನಾಯಕನಾಗಿದ್ದಾಗ ನಿಮ್ಮ ಬಗ್ಗೆ ಮಾತ್ರ ಯೋಚಿಸಲು ಸಾಧ್ಯವಿಲ್ಲ, ದಿಕ್ಕು ತಪ್ಪುತ್ತಿರುವ ಬ್ಯಾಟ್‌ಮನ್‌ಗಳೊಂದಿಗೆ ಅಥವಾ ಬೌಲರ್‌ರೊಂದಿಗೆ ತಂತ್ರಗಾರಿಕೆ ಎಣೆಯಬೇಕಾಗುತ್ತದೆ” ಎಂದಿದ್ದಾರೆ.

“ಇದೆಲ್ಲದರ ನಡುವೆ ತನ್ನ (ನಾಯಕ) ಫಾರ್ಮ್‌ ಬಗ್ಗೆ ನಿರ್ಲಕ್ಷ್ಯ ತಾಳಬೇಕಾಗುತ್ತದೆ. ನಿಮಗೆ ಈ ಒತ್ತಡ ಇಲ್ಲವಾದರೆ ನಿಮ್ಮ ಆಟದ ಬಗ್ಗೆ ನೀನು ಗಮನ ಹರಿಸಬಹುದು. ಟಿ-20 ವಿಶ್ವಕಪ್‌‌ ನಾಯಕತ್ವ ತೊರೆಯುತ್ತಿರುವ ವಿರಾಟ್‌ಗೆ ಇದು ವರದಾನವಾಗಲಿದೆ. ಕೊಹ್ಲಿ ಜವಾಬ್ದಾರಿಗಳ ಕುರಿತು ಹೆಚ್ಚು ಯೋಚಿಸುವ ಅಗತ್ಯವಿರುವುದಿಲ್ಲ. ಆದ್ದರಿಂದ ಕೊಹ್ಲಿಯವರು ತಮ್ಮದೇ ಆದ ಆಟದ ಮೇಲೆ ಗಮನಹರಿಸಬಹುದು ಮತ್ತು ಸಾಧ್ಯವಾದಷ್ಟು ರನ್ ಗಳಿಸಬಹುದು” ಎಂದು ಹೇಳಿದ್ದಾರೆ.

ವಿಶ್ವ ಕ್ರಿಕೆಟ್‌ನ ಅತ್ಯಂತ ಗೌರವಾನ್ವಿತರಲ್ಲಿ ಒಬ್ಬರಾದ ಗವಾಸ್ಕರ್, “ಪ್ರಾಥಮಿಕವಾಗಿ ತಂಡದ ಆಯ್ಕೆಯಲ್ಲಿ ಎಡವಿದ್ದೇ ಜಾಗತಿಕ ಟೂರ್ನಿಗಳಲ್ಲಿ ಭಾರತವು ನಾಕೌಟ್ ಪಂದ್ಯಗಳನ್ನು ಗೆಲ್ಲಲು ವಿಫಲವಾಗಲು ಕಾರಣ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಮಹತ್ವದ ಪಂದ್ಯಗಳಲ್ಲಿ ತಂಡದ ಸಂಯೋಜನೆಯೇ ಭಾರತದ ಸಮಸ್ಯೆಯಾಗಿದೆ. ನಾಕ್ ಔಟ್ ಪಂದ್ಯಗಳಲ್ಲಿ ಸರಿಯಾಗಿ ತಂಡವನ್ನು ಆಯ್ಕೆ ಮಾಡಿದ್ದರೆ, ಭಾರತವು ಕಡಿಮೆ ಸಮಸ್ಯೆಗಳನ್ನು ಎದುರಿಸುತ್ತಿತ್ತು. ಕೆಲವೊಮ್ಮೆ, ನಿಮ್ಮ ಚಿಂತನೆಯ ಪ್ರಕ್ರಿಯೆಯು ವಿಭಿನ್ನವಾಗಿರುತ್ತದೆ” ಎಂದು ಹೇಳಿದ್ದಾರೆ.

“ನಾಕ್‌ಔಟ್‌ ಮತ್ತು ಫೈನಲ್‌ ಪಂದ್ಯಗಳಲ್ಲಿ ಯಾವಾಗಲೂ ಮೊದಲು ಬ್ಯಾಟ್ ಮಾಡಬೇಕು. ರನ್‌ ಹೆಚ್ಚಿಸಬೇಕು. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಂದು ಓವರ್‌ಗೆ 7 ರನ್‌ ಗಳಿಸುವುದೂ ಕಷ್ಟವಾಗಿರುತ್ತದೆ. ನಾವು ಮೊದಲು ಬ್ಯಾಟ್‌ ಮಾಡದೆ ಚೇಸಿಂಗ್‌ ಮಾಡಿದಾಗ ಒಂದೆರಡು ವಿಕೆಟ್‌ ಕಳೆದುಕೊಂಡಾಗ ಗುರಿಮುಟ್ಟುವುದು ಕಷ್ಟವಾಗುತ್ತದೆ” ಎಂದು ಅವರು ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿರಿ: ಟಿ-20 ವಿಶ್ವಕಪ್ ನಂತರ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಲಿರುವ ರಾಹುಲ್ ದ್ರಾವಿಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...