Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...