Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...