Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...