Homeಅಂಕಣಗಳುಬುಧನ ಜಾತಕ ಶಂಭಾ ಜೋಷಿ

ಬುಧನ ಜಾತಕ ಶಂಭಾ ಜೋಷಿ

- Advertisement -
- Advertisement -

“ಭಾಷೆಯೊಳಗಿನ ಪದಗಳಿಗೆ ಇತಿಹಾಸ ಉಂಟು. ಇದರಿಂದಾಗಿ, ಯಾವುದೊಂದು ಪದದ ಅರ್ಥವು ಬದಲಾಗುವುದರ ಹಿಂದಿನ ಇತಿಹಾಸವು ಅರಿಕೆಗೆ ಬರುತ್ತದೆ. ಜೀವನ ಜೀವಿತದ ಪ್ರತಿಬಿಂಬವು ಭಾಷೆಯಲ್ಲಿ ಒಡಮೂಡಿ ನಿಂತಿದೆ” ಎನ್ನುವ ಶಂಭಾ ಜೋಷಿ ಮಾನವನ ಭಾಷಾಪೂರ್ವ ಹಂತಕ್ಕೆ ಹೋಗಿ ಅಲ್ಲಿಂದ ನರನನ್ನು ರೂಪಿಸಿರುವ ಪ್ರಜ್ಞೆ ಮತ್ತು ಬುದ್ಧಿಗಳ ಮೂಲಕ್ಕೆ ಪಯಣಿಸುತ್ತಾರೆ. ಹಿಮ್ಮುಖವಾದ ಈ ಪಯಣಕ್ಕೆ ಕಾರಣವೇನು ಎನ್ನುವುದಾದರೆ ಪಾ ವೆಂ ಆಚಾರ್ಯರವರು ಗುರುತಿಸುವಂತೆ, “ಮನುಷ್ಯನ ಶ್ರೇಯಸ್ಸು ಯಾವುದರಲ್ಲಿದೆ? ಅವನ ಅಶ್ರೇಯಸ್ಸು ಯಾರಿಂದ ಆಗಿದೆ?” ಎಂಬುದು ಶಂಭಾರವರ ಪ್ರಧಾನ ತಾತ್ವಿಕ ಕಾಳಜಿ.

ಧರ್ಮ ಎಂದರೆ ವಿಶ್ವ ನಿಯಮ. ಆದರೆ, ಧರ್ಮ: ಸಂಸ್ಕೃತಿಯ ಮೂಲ ಪ್ರಚೋದನೆ ಮಾನವನ ಅಂತರಂಗದಲ್ಲಿ ಉಂಟು ಎನ್ನುವ ಬುಧನ ಜಾತಕವನ್ನು ಓದುವಾಗ “ತನ್ನ ನೇರಕ್ಕೆ ನೋಡುವ ಬುದ್ಧಿಗೆ, ಭಾಷೆಯ ಕಟ್ಟಡದ ತೊಡಕು ಅರ್ಥವಾಗುವುದಿಲ್ಲ. ಭಾಷೆಯು ವೈವೆತ್ತಿರುವಲ್ಲಿ, ಪ್ರಜ್ಞೆಯ ಅಂಗವಾದ ಮನಸ್ಸಿನ ಕೈವಾಡವಿದೆ” ಎನ್ನುವ ಅಂಶವನ್ನು ಅರಿವಿಗೆಟುಕಿಸುವಲ್ಲಿ ಶಂಭಾ ಯಶಸ್ವಿಯಾಗುತ್ತಾರೆ. ಆದರೆ ಶಂಭಾ ಜೊತೆಗೆ ತಾತ್ವಿಕವಾಗಿ ಪ್ರಯಾಣ ಮಾಡುವುದು ಅಷ್ಟೇನೂ ಸುಲಭವಲ್ಲ. ಒಬ್ಬ ಓದುಗನಿಗೆ ತಾತ್ವಿಕ ತಿಳಿವಳಿಕೆ, ಆಧ್ಯಾತ್ಮದ ತಾಂತ್ರಿಕ ತಿಳಿವಳಿಕೆ ಮತ್ತು ವೇದ ಪುರಾಣ ಇತಿಹಾಸಗಳ ಕೀಲಿ ಪ್ರಜ್ಞೆಗಳಿರಬೇಕು. ಪಾಶ್ಚಾತ್ಯ ಮತ್ತು ಪೌರಾತ್ಯಗಳೆರಡನ್ನೂ ಒಳಗೊಂಡು; ಅವುಗಳಿಂದ ಅತೀತವಾಗಿ ನಿಂತು ವಿವೇಚಿಸಲೂ ತಿಳಿದಿರಬೇಕು. ಮಾನವಶಾಸ್ತ್ರ, ಸಾಂಸ್ಕೃತಿಕ ಚರಿತ್ರೆ ಮತ್ತು ಮನೋವಿಜ್ಞಾನಗಳ ಮೂಲತತ್ವಗಳೂ ತಿಳಿದಿರಬೇಕು. ಇಲ್ಲವಾದರೆ, “ವೇದ ಸುಳ್ಳನ್ನು ನಂಬಹಚ್ಚಿದೆ. ರಾಮಾಯಣ, ಮಹಾಭಾರತ, ಪುರಾಣಾದಿಗಳು ಅಂತರ್ ವಿಸಂಗತಿಗಳಿಂದ ಕೂಡಿವೆ. ಮಾನವಧರ್ಮವನ್ನು ನಷ್ಟ ಮಾಡಿ, ಮೋಕ್ಷಕಾಮಿ ನರಧರ್ಮ ಎತ್ತಿಕಟ್ಟಲು ವ್ಯವಸ್ಥಿತ ರೀತಿಯಿಂದ ರಚನೆಗೊಂಡಿದೆ. ಜೀವನ್ಮುಕ್ತಿಯನ್ನು ಪ್ರತಿಪಾದಿಸುವ ಸನ್ಯಾಸಿ ಸಂತರು ಉನ್ಮಾದಕ್ಕೊಳಗಾಗಿ ಸತ್ಯವನ್ನು ಅರಿಯಲಾರದ ಅಜ್ಞರು; ಇಲ್ಲವೇ ವಂಚಕರು. ಪರಂಪರೆಯ ಕಣ್ಕಟ್ಟನ್ನು ಅರಿಯದೇ ತತ್ವಜ್ಞಾನ ಪ್ರತಿಪಾದಿಸಿರುವ ರಾಮಕೃಷ್ಣ ಪರಮಹಂಸ, ಅರವಿಂದ, ಟಿಳಕ್, ಗಾಂಧೀ, ರಾಧಾಕೃಷ್ಣನ್ ಮೊದಲಾದವರೆಲ್ಲ ಮರುಳರು; ಅರಿತೂ ಪ್ರತಿಪಾದಿಸಿದ್ದರೆ ಮೋಸಗಾರರು. ಭಾರತೀಯರು ಧರ್ಮಗ್ರಂಥಗಳ ಸಮ್ಮೋಹನಕ್ಕೆ ಒಳಗಾಗಿದ್ದಾರೆ. ಅವರ ತಲೆ ತಿರುಗಿಹೋಗಿದೆ ! (ಬ್ರೈನ್‍ವಾಶ್ ಆಗಿದೆ) ಅಂದರೆ, ಭಾರತದಲ್ಲಿ ಸಾಂಸ್ಕೃತಿಕ ತಿರುವುಮುರುವು ಉಂಟಾಗಿದೆ; ಸಾಂಸ್ಕೃತಿಕ ಪಲ್ಲಟವಾಗಿದೆ. ಈ ಸಾಂಸ್ಕೃತಿಕ ಪಲ್ಲಟವೇ ಭಾರತೀಯರ ಅವನತಿಗೆ ಕಾರಣವಾಗಿದೆ” ಎಂದು ನಿಷ್ಟುರಿ ತತ್ವಜ್ಞಾನಿಯೊಬ್ಬ ಗರ್ಜಿಸಿದಂತೆ ತೋರುತ್ತದೆ. ಆದರೆ, “ಭಾರತೀಯರು ತಮ್ಮ ಮೂಲ ಪರಂಪರೆಯನ್ನು ಅರಿತು, ಅದನ್ನು ಆಚರಣೆಯಲ್ಲಿ ತಂದಾಗ ಮಾತ್ರ ಅವರ ಉದ್ಧಾರ ಸಾಧ್ಯ. ‘ವೈವಸ್ವತಮನು ಪ್ರಣೀತ ಮಾನವಧರ್ಮ’ ಇದು ಭಾರತೀಯರ ಧಾರ್ಮಿಕ ಪರಂಪರೆಯ ಮೂಲ ಹೆಸರು. ಪ್ರಪಂಚದಲ್ಲಿ ಧರ್ಮ ಅನ್ನುವುದಿದ್ದರೆ, ಅದು ಮಾನವ ಧರ್ಮ ಒಂದೇ” ಎಂಬುದು ಅವರ ಗ್ರಹಿಕೆ ಮತ್ತು ಸಮರ್ಥನೆಯ ಅರಿಕೆ.

ಭಾರತೀಯರು ತಲೆಯ ಮೇಲೆ ಇಟ್ಟುಕೊಂಡು ಕಣ್ಣು ಮುಚ್ಚಿಕೊಂಡಿರುವ ಪವಿತ್ರಗ್ರಂಥಗಳು ಹೇಗೆ ವೈವಸ್ವತಸತ್ಯವನ್ನು ಬುದ್ಧಿಪೂರ್ವಕವಾಗಿ ಮರೆಮಾಚಿವೆಯೆಂಬುದನ್ನು ಉದಾಹರಣೆಗಳೊಂದಿಗೆ ಶಂಭಾ ಅವರು ಪ್ರತಿಪಾದಿಸಿ ವ್ಯಾಸ, ವಾಲ್ಮೀಕಿ, ವಶಿಷ್ಠಾದಿಗಳೆಲ್ಲಾ ಹೇಗೆ ಎಡವಿದ್ದಾರೆ ಎಂಬುದನ್ನು ಸ್ಪಷ್ಟಪಡಿಸುತ್ತಾರೆ.

ಭಗವದ್ಗೀತೆಯಲ್ಲಿರುವ ಎಡವಟ್ಟುಗಳನ್ನು ತೋರುವ ಶಂಭಾ “ಉದ್ಧರೇತ್ ಆತ್ಮನಾತ್ಮಾನಂ” ಎಂದು ಉಪದೇಶ ಮಾಡುವ ಅ-ಮೃತ ಸ್ವರೂಪ ಈ ಭಗವಂತನು. ಆ ಬಳಿಕ, ನನಗೇ ಶರಣು ಬಾ ಎಂದು ಅಪ್ಪಣೆ ಕೊಡುತ್ತಾನೆ! ಎಂದು ವ್ಯಂಗ್ಯವಾಡುತ್ತಾರೆ.

ನಿಜವಾದ ದೇವರು ಯಾರು? ಅವನ ಐತಿಹಾಸಿಕ ಸ್ವರೂಪವೇನು ಎಂದೆಲ್ಲಾ ಎಳೆ ಹಿಡಿದುಹೋಗುವ ಶಂಭಾರವರ ಅಧ್ಯಯನ ಮತ್ತು ವಿಶ್ಲೇಷಣೆಗಳನ್ನು ಒಪ್ಪದ ಕೆ ಎಸ್ ನಾರಾಯಣಾಚಾರ್ಯರಂತಹ ಸಂಪ್ರದಾಯವಾದಿಗಳು ಅವರನ್ನು ಕಠೋರವಾಗಿ ಟೀಕಿಸಿದ್ದು ಉಂಟು. ಆದರೆ, ಅವರ ಟೀಕೆಯಲ್ಲಿ ವ್ಯಕ್ತಿಗತವಾಗಿ ನಿಂದನೆಯ ಮಟ್ಟಕ್ಕೆ ಹೋಗುವರೇ ಹೊರತು, ಶಂಭಾ ಎತ್ತುವ ಪ್ರಶ್ನೆಗಳಿಗೆ ಉತ್ತರಿಸಲು ಅಥವಾ ಪರ್ಯಾಯವಾಗಿ ಮತ್ತೊಂದು ಸಂಶೋಧನಾ ಶಿಸ್ತನ್ನು ತೋರಿಸಲು ವಿಫಲರಾಗುತ್ತಾರೆ.

ಬುದ್ಧಿ, ಪ್ರಜ್ಞೆ, ಮಾನವ, ನರ, ಧರ್ಮ, ಸಂಸ್ಕೃತಿ ಹೀಗೆ ಎಲ್ಲವನ್ನೂ ಪದರಪದರವಾಗಿ ಅರಿವಿಗೆ ಎಟುಕಿಸುವ ಈ ಬುಧನ ಜಾತಕ ಅರಿಯಲು ಬಹು ತಾಳ್ಮೆ ಮತ್ತು ಎಚ್ಚರಿಕೆ ಬೇಕು.

ಈ ಪುಟ್ಟ ಲೇಖನದಲ್ಲಿ ಅವನ್ನು ಸಂಗ್ರಹಿಸಿ ಒಪ್ಪಿಸಲು ಸಾಧ್ಯವೇ ಇಲ್ಲ. ಆದರೆ ಇದೊಂದು ಪರಿಚಯಾತ್ಮಕ ಲೇಖನವಾಗಿ ಓದುಗರು ಶಂಭಾ ಕೃತಿಗಳ ಕಡೆಗೆ ಹೊರಳಲಿ ಮತ್ತು ತಿಳಿಯುವ ಪ್ರಯತ್ನಗಳನ್ನು ಮಾಡಲಿ ಎಂಬ ಆಶಯವನ್ನು ಪ್ರಾಮಾಣಿಕವಾಗಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...