Homeಮುಖಪುಟಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

- Advertisement -
- Advertisement -

ವೀರ್ಯ ಅಥವಾ ಅಂಡಾಣು ದಾನ ಮಾಡಿದವರು, ಆ ದಾನದಿಂದ ಜನಿಸಿದ ಮಗುವಿನ ಮೇಲೆ ಕಾನೂನುಬದ್ಧ ಅಧಿಕಾರ ಹೊಂದಿರುವುದಿಲ್ಲ. ಆ ಮಗುವಿನ ಜೈವಿಕ ಪಾಲಕರು ತಾವು ಎಂದು ಹೇಳುವಂತೆಯೂ ಇಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.

ಬಾಡಿಗೆ ತಾಯ್ತನದ ಮೂಲಕ ಜನಿಸಿದ ತನ್ನ ಇಬ್ಬರು ಪುತ್ರಿಯರಿಂದ ತನ್ನನ್ನು ದೂರವಿರಿಸಲಾಗಿದೆ. ತನ್ನ ಪತಿ ಹಾಗೂ ಅಂಡಾಣು ದಾನಿಯಾದ ತನ್ನ ಕಿರಿಯ ಸೋದರಿಯ ಜೊತೆ ಮಕ್ಕಳು ವಾಸಿಸುತ್ತಿದ್ದಾರೆಂದು ದೂರಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಸ್ವಾಭಾವಿಕವಾಗಿ ಗರ್ಭಿಣಿಯಾಗಲು ಸಾಧ್ಯವಾಗದ ತನ್ನ ಅಕ್ಕನಿಗೆ ಸ್ವಯಂಪ್ರೇರಿತವಾಗಿ ಅಂಡಾಣು (ಮೊಟ್ಟೆ) ದಾನ ಮಾಡಿದ್ದ ತಂಗಿ, ಬಳಿಕ ಅಕ್ಕನ ಅವಳಿ ಹೆಣ್ಣು ಮಕ್ಕಳಿಗೆ ತಾನೇ ಜೈವಿಕ ತಾಯಿ ಎಂದು ವಾದಿಸಿದ್ದರು.

ಆದರೆ, ನ್ಯಾಯಾಲಯ ಈ ವಾದವನ್ನು ಪುರಸ್ಕರಿಸಲು ನಿರಾಕರಿಸಿದೆ. ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಿಯಾಗಿದ್ದರೂ, ಅವಳಿ ಮಕ್ಕಳ ಮೇಲೆ ಆಕೆಗೆ ಯಾವುದೇ ಕಾನೂನಾತ್ಮಕ ಹಕ್ಕಿರುವುದಿಲ್ಲವೆಂದು ಹೇಳಿದೆ. ಅಲ್ಲದೆ ತನ್ನ ಐದು ವರ್ಷ ವಯಸ್ಸಿನ ಅವಳಿ ಪುತ್ರಿಯರನ್ನು ಸಂದರ್ಶಿಸುವುದಕ್ಕೆ ಅರ್ಜಿದಾರ ಮಹಿಳೆಗೆ ಅನುಮತಿ ನೀಡಿದೆ.

ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಕ್ಕೆ ಸ್ವಇಚ್ಚೆಯಿಂದ ಮುಂದೆ ಬಂದಿದ್ದರು. 2018ರಲ್ಲಿ ಗರ್ಭ ಧರಿಸಿದ ಬಾಡಿಗೆ ತಾಯಿಯೊಬ್ಬರು 2019ರಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ನಡುವೆ 2019ರಲ್ಲಿ ನಡೆದ ಅಪಘಾತವೊಂದರಲ್ಲಿ ಅಂಡಾಣು ದಾನ ಮಾಡಿದ್ದ ತಂಗಿಯ ಪತಿ ಹಾಗೂ ಮಗಳು ಮೃತಪಟ್ಟಿದ್ದರು. ಅರ್ಜಿದಾರ ಮಹಿಳೆ ಹಾಗೂ ಆಕೆಯ ಪತಿ ನಡುವೆ ಮನಸ್ತಾಪ ಉಂಟಾಗಿ ಪತಿಯು 2021ರ ಮಾರ್ಚ್‌ನಲ್ಲಿ ಪತ್ನಿಗೆ ಮಾಹಿತಿ ನೀಡದೆ, ಮಕ್ಕಳೊಂದಿಗೆ ಇನ್ನೊಂದು ಫ್ಲ್ಯಾಟ್‌ನಲ್ಲಿ ವಾಸಿಸಲು ಪ್ರಾರಂಭಿಸಿದ್ದರು.

ಬಳಿಕ ಆತ, ಅಪಘಾತದಿಂದ ಗಂಡ, ಮಗಳನ್ನು ಕಳೆದುಕೊಂಡಿದ್ದ ಪತ್ನಿಯ ತಂಗಿ ಜೊತೆ ವಾಸಿಸಲು ಪ್ರಾರಂಭಿಸಿದ್ದ. ಮಕ್ಕಳೂ ಅವರ ಜೊತೆಗಿದ್ದರು. ಇದರಿಂದ ಅರ್ಜಿದಾರ ಮಹಿಳೆ ಒಬ್ಬಂಟಿಯಾಗಿದ್ದರು. ಹಾಗಾಗಿ, ತಂಗಿ ಮತ್ತು ತನ್ನ ಪತಿ ಜೊತೆ ಇರುವ ತನ್ನ ಮಕ್ಕಳ ಭೇಟಿಗೆ ಅವಕಾಶ ನೀಡುವಂತೆ ಮಹಿಳೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ಆಕೆಯ ಮನವಿ ಪುರಸ್ಕರಿಸದ ಹಿನ್ನೆಲೆ, ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ : ಆರ್‌ಎಸ್‌ಎಸ್‌ ನಾಯಕರ ಪುಸ್ತಕಗಳ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಜ್ಞಾನ ಬೋಧಿಸುವಂತೆ ಕಾಲೇಜುಗಳಿಗೆ ಸೂಚಿಸಿದ ಮಧ್ಯಪ್ರದೇಶ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...