Homeಮುಖಪುಟಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

- Advertisement -
- Advertisement -

ವೀರ್ಯ ಅಥವಾ ಅಂಡಾಣು ದಾನ ಮಾಡಿದವರು, ಆ ದಾನದಿಂದ ಜನಿಸಿದ ಮಗುವಿನ ಮೇಲೆ ಕಾನೂನುಬದ್ಧ ಅಧಿಕಾರ ಹೊಂದಿರುವುದಿಲ್ಲ. ಆ ಮಗುವಿನ ಜೈವಿಕ ಪಾಲಕರು ತಾವು ಎಂದು ಹೇಳುವಂತೆಯೂ ಇಲ್ಲ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಹೇಳಿದೆ.

ಬಾಡಿಗೆ ತಾಯ್ತನದ ಮೂಲಕ ಜನಿಸಿದ ತನ್ನ ಇಬ್ಬರು ಪುತ್ರಿಯರಿಂದ ತನ್ನನ್ನು ದೂರವಿರಿಸಲಾಗಿದೆ. ತನ್ನ ಪತಿ ಹಾಗೂ ಅಂಡಾಣು ದಾನಿಯಾದ ತನ್ನ ಕಿರಿಯ ಸೋದರಿಯ ಜೊತೆ ಮಕ್ಕಳು ವಾಸಿಸುತ್ತಿದ್ದಾರೆಂದು ದೂರಿ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿಲಿಂದ್ ಜಾಧವ್ ಅವರ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

ಸ್ವಾಭಾವಿಕವಾಗಿ ಗರ್ಭಿಣಿಯಾಗಲು ಸಾಧ್ಯವಾಗದ ತನ್ನ ಅಕ್ಕನಿಗೆ ಸ್ವಯಂಪ್ರೇರಿತವಾಗಿ ಅಂಡಾಣು (ಮೊಟ್ಟೆ) ದಾನ ಮಾಡಿದ್ದ ತಂಗಿ, ಬಳಿಕ ಅಕ್ಕನ ಅವಳಿ ಹೆಣ್ಣು ಮಕ್ಕಳಿಗೆ ತಾನೇ ಜೈವಿಕ ತಾಯಿ ಎಂದು ವಾದಿಸಿದ್ದರು.

ಆದರೆ, ನ್ಯಾಯಾಲಯ ಈ ವಾದವನ್ನು ಪುರಸ್ಕರಿಸಲು ನಿರಾಕರಿಸಿದೆ. ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಿಯಾಗಿದ್ದರೂ, ಅವಳಿ ಮಕ್ಕಳ ಮೇಲೆ ಆಕೆಗೆ ಯಾವುದೇ ಕಾನೂನಾತ್ಮಕ ಹಕ್ಕಿರುವುದಿಲ್ಲವೆಂದು ಹೇಳಿದೆ. ಅಲ್ಲದೆ ತನ್ನ ಐದು ವರ್ಷ ವಯಸ್ಸಿನ ಅವಳಿ ಪುತ್ರಿಯರನ್ನು ಸಂದರ್ಶಿಸುವುದಕ್ಕೆ ಅರ್ಜಿದಾರ ಮಹಿಳೆಗೆ ಅನುಮತಿ ನೀಡಿದೆ.

ಅರ್ಜಿದಾರ ಮಹಿಳೆಯ ತಂಗಿ ಅಂಡಾಣು ದಾನಕ್ಕೆ ಸ್ವಇಚ್ಚೆಯಿಂದ ಮುಂದೆ ಬಂದಿದ್ದರು. 2018ರಲ್ಲಿ ಗರ್ಭ ಧರಿಸಿದ ಬಾಡಿಗೆ ತಾಯಿಯೊಬ್ಬರು 2019ರಲ್ಲಿ ಮಕ್ಕಳಿಗೆ ಜನ್ಮ ನೀಡಿದ್ದರು. ಈ ನಡುವೆ 2019ರಲ್ಲಿ ನಡೆದ ಅಪಘಾತವೊಂದರಲ್ಲಿ ಅಂಡಾಣು ದಾನ ಮಾಡಿದ್ದ ತಂಗಿಯ ಪತಿ ಹಾಗೂ ಮಗಳು ಮೃತಪಟ್ಟಿದ್ದರು. ಅರ್ಜಿದಾರ ಮಹಿಳೆ ಹಾಗೂ ಆಕೆಯ ಪತಿ ನಡುವೆ ಮನಸ್ತಾಪ ಉಂಟಾಗಿ ಪತಿಯು 2021ರ ಮಾರ್ಚ್‌ನಲ್ಲಿ ಪತ್ನಿಗೆ ಮಾಹಿತಿ ನೀಡದೆ, ಮಕ್ಕಳೊಂದಿಗೆ ಇನ್ನೊಂದು ಫ್ಲ್ಯಾಟ್‌ನಲ್ಲಿ ವಾಸಿಸಲು ಪ್ರಾರಂಭಿಸಿದ್ದರು.

ಬಳಿಕ ಆತ, ಅಪಘಾತದಿಂದ ಗಂಡ, ಮಗಳನ್ನು ಕಳೆದುಕೊಂಡಿದ್ದ ಪತ್ನಿಯ ತಂಗಿ ಜೊತೆ ವಾಸಿಸಲು ಪ್ರಾರಂಭಿಸಿದ್ದ. ಮಕ್ಕಳೂ ಅವರ ಜೊತೆಗಿದ್ದರು. ಇದರಿಂದ ಅರ್ಜಿದಾರ ಮಹಿಳೆ ಒಬ್ಬಂಟಿಯಾಗಿದ್ದರು. ಹಾಗಾಗಿ, ತಂಗಿ ಮತ್ತು ತನ್ನ ಪತಿ ಜೊತೆ ಇರುವ ತನ್ನ ಮಕ್ಕಳ ಭೇಟಿಗೆ ಅವಕಾಶ ನೀಡುವಂತೆ ಮಹಿಳೆ ಸ್ಥಳೀಯ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯ ಆಕೆಯ ಮನವಿ ಪುರಸ್ಕರಿಸದ ಹಿನ್ನೆಲೆ, ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ : ಆರ್‌ಎಸ್‌ಎಸ್‌ ನಾಯಕರ ಪುಸ್ತಕಗಳ ಮೂಲಕ ವಿದ್ಯಾರ್ಥಿಗಳಿಗೆ ಭಾರತೀಯ ಜ್ಞಾನ ಬೋಧಿಸುವಂತೆ ಕಾಲೇಜುಗಳಿಗೆ ಸೂಚಿಸಿದ ಮಧ್ಯಪ್ರದೇಶ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...