Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...