Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...