Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....