Homeಮುಖಪುಟನರ್ಸಿಂಗ್ ವಿದ್ಯಾರ್ಥಿಗಳಿಗೆ 'ವರದಕ್ಷಿಣೆಯ ಉಪಯೋಗಗಳು' ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

- Advertisement -
- Advertisement -

ಸಾಮಾಜಿಕ ಪಿಡುಗೆಂದು ನಿರೂಪಿತವಾಗಿರುವ, ಪ್ರತಿಗಾಮಿ ಚಿಂತನೆ ಮತ್ತು ಕ್ರೂರ ಆಚರಣೆಯಾಗಿರುವ ವರದಕ್ಷಿಣೆ ಪದ್ದತಿಯನ್ನು ಪ್ರೋತ್ಸಾಹಿಸುವಂತಹ ಪಠ್ಯ ಪ್ರಕಟವಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಪಠ್ಯ ಮುದ್ರಿಸಿದ ಪಠ್ಯ ಪುಸ್ತಕ ಸಮಿತಿ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ರಾಷ್ಟ್ರೀಯ ಮಹಿಳಾ ಆಯೋಗವು ಮಾನವ ಸಂಪನ್ಮೂಲ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದೆ.

ಆ ಪುಸ್ತಕದ ಮುಖಪುಟದ ಪ್ರಕಾರ ಟಿ.ಕೆ ಇಂದ್ರಾಣಿಯವರು ಭಾರತೀಯ ನರ್ಸಿಂಗ್ ಕೌನ್ಸಿಲ್ ಪಠ್ಯಕ್ರಮದ ಪ್ರಕಾರ ಬರೆದಿರುವ ‘ನರ್ಸ್‌ಗಳಿಗಾಗಿ ಸಮಾಜಶಾಸ್ತ್ರದ ಪಠ್ಯಪುಸ್ತಕ’ದಲ್ಲಿ ವರದಕ್ಷಿಣೆಯ ಉಪಯೋಗಗಳು ಎಂಬ ಪಠ್ಯ ಪ್ರಕಟವಾಗಿದೆ. ಅಪರ್ಣ ಎಂಬ ಟ್ವಿಟರ್ ಬಳಕೆದಾರರು ಇದನ್ನು ಪೋಸ್ಟ್ ಮಾಡಿದ ನಂತರ ವಿವಾದದ ಕಿಡಿ ಹೊತ್ತಿದೆ.

‘ವರದಕ್ಷಿಣೆಯ ಉಪಯೋಗಗಳು’ ಎಂಬ ಶೀರ್ಷಿಕೆಯಲ್ಲಿ ಹೆಣ್ಣು ಮಗಳೊಬ್ಬಳು ತಮ್ಮ ಪೋಷಕರಿಂದ ಆಸ್ತಿಯಲ್ಲಿ ಪಡೆಯುವ ಪಾಲನ್ನು ವರದಕ್ಷಿಣೆ ಎಂದು ಕರೆಯಲಾಗುತ್ತದೆ ಎಂದು ವಿವರಿಸಲಾಗಿದೆ. ಮುಂದುವರೆದು “ಹೊಸ ಸಂಸಾರ ಸ್ಥಾಪನೆಗೆ ವರದಕ್ಷಿಣೆ ಸಹಕಾರಿ. ಮನೆಯ ಸಾಮಾನುಗಳಾದ ಮಂಚ, ಹಾಸಿಗೆ, ಟಿವಿ, ಫ್ಯಾನ್, ರೆಫ್ರಿಜರೇಟರ್, ಪಾತ್ರೆಗಳು, ಬಟ್ಟೆಗಳು ಮತ್ತು ವಾಹನವನ್ನು ಸಹ ವರದಕ್ಷಿಣೆಯಾಗಿ ನೀಡುವ ಪದ್ಧತಿ ನಮ್ಮ ಭಾರತದ ಅನೇಕ ಭಾಗಗಳಲ್ಲಿ ಕಂಡುಬರುತ್ತದೆ” ಎಂದು ಬರೆಯಲಾಗಿದೆ.

ಪ್ರಚಲಿತದಲ್ಲಿರುವ ವರದಕ್ಷಿಣೆ ಪಿಡುಗಿನ ಬಗ್ಗೆ ಈ ಪಠ್ಯವು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಕಿಡಿಕಾರಿದ್ದಾರೆ. ಮಾನವ ಸಂಪನ್ಮೂಲ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಅಲ್ಲದೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್‌ರವರಿಗೆ ಸಹ ಪತ್ರ ಬರೆದಿದ್ದು, ಭಾರತೀಯ ನರ್ಸಿಂಗ್ ಕೌನ್ಸಿಲ್ ಈ ಪಠ್ಯಕ್ಕೆ ಹೇಗೆ ಅನುಮತಿ ನೀಡಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಆಗ್ರಹಿಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಇಂಜಿನಿಯರಿಂಗ್ ಓದುತ್ತಿದ್ದ ಯುವತಿಯೊಬ್ಬಳು ಡೌರಿಯ ಅನುಕೂಲಗಳು ಎಂಬ ಬರಹವನ್ನು ಹಂಚಿಕೊಂಡು ವಿವಾದ ಎಬ್ಬಿಸಿದ್ದರು. ಈಗ ಅಂತಹ ಅನಾಹುತವನ್ನು ಶಿಕ್ಷಣ ಸಂಸ್ಥೆಗಳೆ ಎಸಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ವರದಕ್ಷಿಣೆ ಎಂಬ ಅನಿಷ್ಟ ಪದ್ದತಿ

ಇಂದಿಗೂ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ಸುಮಾರು 8,000 ಮಂದಿ ವರದಕ್ಷಿಣೆ ಪದ್ದತಿಗೆ ಬಲಿಯಾಗುತ್ತಿದ್ದಾರೆ. ಇದು ಕೇವಲ ಅಧಿಕೃತವಾಗಿ ವರದಿಯಾಗಿರುವುದು. ಆದರೆ ದಾಖಲಾಗದ ಸಾವಿರಾರು ಪ್ರಕರಣಗಳ ಅಂಕಿ-ಅಂಶಗಳು ಲಭ್ಯವಾಗುವುದಿಲ್ಲ. ಆತಂಕಕಾರಿ ವಿಷಯವೆಂದರೆ, 1930 ರಲ್ಲಿ 40% ಮದುವೆಗಳಲ್ಲಿ ವರದಕ್ಷಿಣಿ ನೀಡಲಾಗುತ್ತಿತ್ತು. ಆದರೆ 2000 ರಲ್ಲಿ ದೇಶದಲ್ಲಿ ನಡೆಯುವ ಶೇ.90 ರಷ್ಟು ಮದುವೆಗಳಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ನೀಡುತ್ತಿದ್ದಾರೆ. ಈ ವರದಕ್ಷಿಣಿಯಿಂದ ಉಂಟಾಗುವ ಅನಾಹುತಗಳು ಬರಿ ಸಾವು, ದೌರ್ಜನ್ಯವಲ್ಲ. ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಶಿಶುಗಳ ಹತ್ಯೆಗೆ ಕಾರಣವಾಗುತ್ತದೆ. ಒಟ್ಟಾರೆಯಾಗಿ ಹೇಳುವುದಾದರೆ ಅದು ಭ್ರಷ್ಟತೆಯನ್ನು ಬೆಂಬಲಿಸಿದಂತೆ..

ಕೇರಳದಲ್ಲಿ ಇತ್ತಿಚೆಗೆ ಮೂವರು ಯುವತಿಯರು ವರದಕ್ಷಿಣಿಗೆ ಬಲಿಯಾದ ಬಳಿಕ ಪ್ರಕರಣಗಳ ವಿಚಾರಣೆಗೆ, ತನಿಖೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಶೇಷ ತನಿಖಾ ದಳ ರಚಿಸಿದ್ದಾರೆ. ’ಲಿಂಗಸಮಾನತೆಯನ್ನು ಮಕ್ಕಳ ಮನಸ್ಸಿನಲ್ಲಿ ಇಳಿಸುವ ಸಲುವಾಗಿ ಕೇರಳದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುತ್ತದೆ. ಮಹಿಳೆಯರಿಗೆ ಅಗೌರವ ತೋರುವ ಪದಗಳು ಮತ್ತು ನುಡಿಗಟ್ಟುಗಳನ್ನು ತೆಗೆದುಹಾಕಲಾಗುತ್ತದೆ. ಶಾಲಾ-ಕಾಲೇಜುಗಳನ್ನು ಲಿಂಗಸಮಾನತೆಯ ಮತ್ತು ಸಮಾನ ಹಕ್ಕುಗಳ ತಾಣಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

’ಒಂದು ಸಮಾಜವಾಗಿ, ನಾವು ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆಯನ್ನು ಸುಧಾರಿಸಬೇಕಾಗಿದೆ. ಮದುವೆಯು ಕುಟುಂಬದ ಸಾಮಾಜಿಕ ಸ್ಥಾನಮಾನ ಮತ್ತು ಸಂಪತ್ತಿನ ಆಡಂಬರದ ಪ್ರದರ್ಶನವಾಗಿರಬಾರದು. ಅನಾಗರಿಕ ವರದಕ್ಷಿಣೆ ಪದ್ಧತಿಯು ನಮ್ಮ ಹೆಣ್ಣುಮಕ್ಕಳನ್ನು ಸರಕುಗಳಂತೆ ಪರಿಗಣಿಸುತ್ತದೆ ಎಂಬುದನ್ನು ಪೋಷಕರು ಅರಿತುಕೊಳ್ಳಬೇಕು. ನಾವು ಅವರನ್ನು ಮಾನವರಂತೆ ಉತ್ತಮವಾಗಿ ಪರಿಗಣಿಸಬೇಕು” ಎಂದಿದ್ದಾರೆ.


ಇದನ್ನೂ ಓದಿ; 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳು, ಮಹಿಳಾ ವಿರೋಧಿಗಳು ಎಂಬುದು ಮತ್ತೊಮ್ಮೆ ಸಾಕ್ಷ್ಯಾಧಾರಗಳ ಸಮೇತ ಸಾಬೀತಾಗಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...