Homeಕರ್ನಾಟಕಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆ ಗರಿಗೆದರಿದ್ದು, ಈ ಬಾರಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

ದಲಿತರೊಬ್ಬರನ್ನು ಸಿಎಂ ಆಗಿ ಹೆಸರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಪಕ್ಷದ ಹೈಕಮಾಂಡ್‌‌ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು.

ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...