Homeಕರ್ನಾಟಕಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆ ಗರಿಗೆದರಿದ್ದು, ಈ ಬಾರಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

ದಲಿತರೊಬ್ಬರನ್ನು ಸಿಎಂ ಆಗಿ ಹೆಸರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಪಕ್ಷದ ಹೈಕಮಾಂಡ್‌‌ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು.

ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...