Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...