Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...