Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...