Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...