Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...