Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...