Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...