Homeಸಿನಿಮಾಕ್ರೀಡೆವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

ವರ್ಡ್‌ಕಪ್‌ ಗೆಲುವಿನ ನಂತರ ನಿವೃತ್ತಿಯ ಯೋಚನೆಯಿಂದ ಹಿಂದೆ ಸರಿದ ಮೆಸ್ಸಿ

- Advertisement -
- Advertisement -

“ಈ ಬಾರಿಯ ಫಿಫಾ ವಿಶ್ವಕಪ್ ಫೈನಲ್ ಪಂದ್ಯವೇ ನನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವಾಗಬಹುದು” ಎಂದು ಹೇಳಿಕೊಂಡಿದ್ದ ಅರ್ಜೆಂಟೀನಾದ ಫುಲ್‌ಬಾಲ್‌ ಸ್ಟಾರ್‌‌ ಲಿಯೋನೆಲ್‌ ಮೆಸ್ಸಿಯವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸುಳಿವು ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾ ವಿರುದ್ಧ ಆಘಾತಕಾರಿ ಸೋಲಿನ ನಂತರ ಅರ್ಜೆಂಟೀನಾ 16ರ ಸುತ್ತಿಗೆ ಪ್ರವೇಶಿಸಲು ಹೋರಾಡುತ್ತಿತ್ತು. ಲಿಯೋನೆಲ್ ಮೆಸ್ಸಿಯವರು ತಮ್ಮ ಅಭಿಮಾನಿಗಳಿಗೆ ನಂಬಿಕೆ ಇಡುವಂತೆ ಮನವಿ ಮಾಡಿದ್ದರು. ಜೊತೆಗೆ ಫೈನಲ್‌ವರೆಗೂ ಅರ್ಜೆಂಟೀನಾವನ್ನು ಮುನ್ನಡೆಸಿ, ಫ್ರಾನ್ಸ್‌ ವಿರುದ್ಧ ಗೆಲುವು ಸಾಧಿಸುವಲ್ಲಿ ಸಫಲರಾಗಿದ್ದಾರೆ. ಮೂರು ದಶಕಗಳ ನಂತರ ಅರ್ಜೆಂಟೀನಾಕ್ಕೆ ವಿಶ್ವಕಪ್ ದೊರೆತಿದೆ.

ಅರ್ಜೆಂಟೀನಾ ನಾಯಕ ಮೆಸ್ಸಿಯವರು ಲುಸೈಲ್ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಎರಡು ಬಾರಿ ಗೋಲು ಗಳಿಸಿದ್ದರು. ತಮ್ಮ ಅವಿಸ್ಮರಣೀಯ ಫಿಫಾ ಜರ್ನಿಯಲ್ಲಿ ವಿಶ್ವಕಪ್ ಟ್ರೋಫಿ ಗೆಲ್ಲಿಸಿಕೊಟ್ಟರು.

ವಿಶ್ವಕಪ್ ಫೈನಲ್ ಪಂದ್ಯಾವಳಿಯೇ ತನ್ನ ಕೊನೆಯ ಪ್ರದರ್ಶನ ಎಂದು ಮೆಸ್ಸಿ ಈ ಹಿಂದೆ ಎರಡು ಬಾರಿ ಸ್ಪಷ್ಟಪಡಿಸಿದ್ದರು. ಆದರೆ ಗೆಲುವಿನಿಂದ ಖುಷಿಯಾಗಿರುವ ಅರ್ಜೆಂಟೀನಾ ನಾಯಕ ತನ್ನ ನಿಲುವನ್ನು ಬದಲಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಕತಾರ್‌ನಲ್ಲಿ ವಿಶ್ವಕಪ್ ಪ್ರಾರಂಭವಾಗುವ ಮೊದಲು 35 ವರ್ಷದ ಮೆಸ್ಸಿಯವರು ಈ ಟೂರ್ನಿಯೇ ಅಂತಿಮ ಪ್ರದರ್ಶನ ಎಂದು ಹೇಳಿದ್ದರು. ಕಳೆದ ವಾರ ಸೆಮಿಫೈನಲ್‌ನಲ್ಲಿ ಅರ್ಜೆಂಟೀನಾ ತಂಡವು ಕ್ರೊಯೇಷಿಯಾವನ್ನು ಸೋಲಿಸಿದ ನಂತರ ಇದೇ ಮಾತನ್ನು ಮತ್ತೆ ಹೇಳಿದ್ದರು.

ಆದಾಗ್ಯೂ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯುವ ತಮ್ಮ ಬಹು ಕಾಲದ ಕನಸು ನನಸಾದ ನಂತರ ಮೆಸ್ಸಿ, ಅರ್ಜೆಂಟೀನಾ ಪರ ಆಡುವುದನ್ನು ಮುಂದುವರಿಸುವುದಾಗಿ ಬಹಿರಂಗಪಡಿಸಿದ್ದಾರೆ.

“ಇದು ನಿಜಕ್ಕೂ ನಂಬಲಾಗದ ಸಂಗತಿ. ದೇವರು ನನಗೆ ಕಪ್ ನೀಡಲಿದ್ದಾನೆ ಎಂದು ನನಗೆ ತಿಳಿದಿತ್ತು. ನನಗೆ ಖಚಿತವಾಗಿತ್ತು – ಇದು ನಮಗೆ ದೊಡ್ಡ ಸಂತೋಷದ ಸಂಗತಿಯಾಗಿತ್ತು. ನಾನು ಬಹಳ ದಿನಗಳಿಂದ ಈ ದೊಡ್ಡ ಕನಸನ್ನು ಹೊಂದಿದ್ದೆ. ನಾನು ವಿಶ್ವಕಪ್‌ನೊಂದಿಗೆ ನನ್ನ ವೃತ್ತಿಜೀವನವನ್ನು ಕೊನೆಗಾಣಿಸಲು ಬಯಸಿದ್ದೆ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಇಲ್ಲ, ನಾನು ರಾಷ್ಟ್ರೀಯ ತಂಡದಿಂದ ನಿವೃತ್ತಿ ಹೊಂದಲು ಹೋಗುವುದಿಲ್ಲ. ನಾನು ಅರ್ಜೆಂಟೀನಾ ಶರ್ಟ್‌ನೊಂದಿಗೆ ವಿಶ್ವಕಪ್ ಚಾಂಪಿಯನ್ ಆಗಿ ಆಡುವುದನ್ನು ಮುಂದುವರಿಸಲು ಬಯಸುತ್ತೇನೆ” ಎಂದಿದ್ದಾರೆ ಮೆಸ್ಸಿ. ಆ ಮೂಲಕ ಮತ್ತಷ್ಟು ಕಾಲ ಫುಟ್ಬಾಲ್‌ ಅಭಿಮಾನಿಗಳಿಗೆ ತಮ್ಮ ಕಾಲ್ಚಳಕವನ್ನು ಪ್ರದರ್ಶಿಸುವ ಸೂಚನೆ ನೀಡಿದ್ದಾರೆ.

ಪೆನಾಲ್ಟಿ ಶೂಟೌಟ್ ಮೂಲಕ ಅರ್ಜೆಂಟೀನಾ 4-2 ಗೋಲುಗಳಿಂದ ಫ್ರಾನ್ಸ್ ವಿರುದ್ಧ ಗೆದ್ದಿತು. ಫೈನಲ್‌ನ ನಂತರ ಅರ್ಜೆಂಟೀನಾದ ಫುಟ್‌ಬಾಲ್ ಕೋಚ್ ಸ್ಕಾಲೋನಿ ಮಾತನಾಡಿ, “ಮೆಸ್ಸಿ ಇನ್ನೂ 2026ರಲ್ಲಿ ಮುಂದಿನ ವಿಶ್ವಕಪ್‌ವರೆಗೆ ಆಡಬಹುದು” ಎಂದಿದ್ದಾರೆ. ಅರ್ಜೆಂಟೀನಾ ನಾಯಕನಿಗೆ ಬಾಗಿಲು ತೆರೆದಿದ್ದು, ನಿರ್ಧಾರವನ್ನು ಅವರಿಗೆಯೇ ಬಿಟ್ಟಿದ್ದಾರೆ.

“ಅವರು (ಮೆಸ್ಸಿ) ಆಡಬೇಕೆಂದು ಭಾವಿಸಿದರೆ ಮುಂದಿನ ವಿಶ್ವಕಪ್‌ಗೆ ನಾವು 10ನೇ ಸಂಖ್ಯೆಯ ಜೆರ್ಸಿಯನ್ನು ಸಿದ್ಧಪಡಿಸಬೇಕು ಎಂದು ನಾನು ಭಾವಿಸುತ್ತೇನೆ. ನಾವು ಅವರನ್ನು ಮುಂದಿನ ವಿಶ್ವಕಪ್‌ಗೆ ಉಳಿಸಬೇಕಾಗಿದೆ. ಮೆಸ್ಸಿಯವರು ಆಟವಾಡಲು ಬಯಸಿದರೆ, ಅವರು ನಮ್ಮೊಂದಿಗೆ ಇರುತ್ತಾರೆ. ಅವರು ಈಗ ತಮ್ಮ ವೃತ್ತಿಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸಲು ಹೆಚ್ಚು ಅರ್ಹರಾಗಿದ್ದಾರೆ” ಎಂದಿದ್ದಾರೆ.

“ನಾನು ತುಂಬಾ ಹೆಮ್ಮೆಪಡುತ್ತೇನೆ. ವಿಶ್ವಕಪ್ ವಿಜೇತನಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ನಾವು 90 ನಿಮಿಷಗಳಲ್ಲಿ ಪಂದ್ಯವನ್ನು ಗೆಲ್ಲಬೇಕಾಗಿತ್ತು. ಆದರೆ ಹೆಚ್ಚಿನ ಸಮಯ ತೆಗೆದುಕೊಂಡೆವು. ಆದರೆ ಹೋರಾಡಿ ಗೆದ್ದೆವು” ಎಂದಿದ್ದಾರೆ.

“ಈ ಆಟಗಾರರು ಜನರಿಗಾಗಿ ಆಡುತ್ತಾರೆ, ಅವರು ಅರ್ಜೆಂಟೀನಾ ಅಭಿಮಾನಿಗಳಿಗಾಗಿ ಆಡುತ್ತಾರೆ, ಅವರು ಇಡೀ ದೇಶಕ್ಕಾಗಿ ಆಡುತ್ತಾರೆ” ಎಂದು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...