Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...