Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...