Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...