Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...