Homeಮುಖಪುಟಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

ಲೋಕಸಭೆ ಚುನಾವಣೆ: ಹಿಂಸೆಗೆ ಪ್ರಚೋದಿಸುವ, ಮುಸ್ಲಿಮರ ವಿರುದ್ಧದ ಜಾಹೀರಾತುಗಳನ್ನು ಅನುಮೋದಿಸಿದ್ದ ಮೆಟಾ: ವರದಿ

- Advertisement -
- Advertisement -

ಭಾರತದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ, ಈ ಮಧ್ಯೆ ತಪ್ಪು ಮಾಹಿತಿಯನ್ನು ಹರಡುವ ಸುದ್ದಿಗಳು,  ವೀಡಿಯೊಗಳು ದೇಶದ ಸಾಮರಸ್ಯಕ್ಕೆ ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿವೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿಯನ್ನು ಹರಡುವ ಹಲವಾರು ರಾಜಕೀಯ ಜಾಹೀರಾತುಗಳನ್ನು ಮೆಟಾ ಅನುಮೋದಿಸಿದೆ ಎನ್ನುವುದನ್ನು ವರದಿಯೊಂದು ಬಹಿರಂಗಪಡಿಸಿದೆ.

ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಮಾಲೀಕತ್ವ ಹೊಂದಿರುವ ಮೆಟಾ ಭಾರತದ ಚುನಾವಣೆಯ ಸಮಯದಲ್ಲಿ AI(ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌)(ಕೃತಕ ಬುದ್ಧಿಮತ್ತೆ)ಯ ರಾಜಕೀಯ ಜಾಹೀರಾತುಗಳನ್ನು ಅನುಮೋದಿಸಿದೆ. ಆ ಜಾಹೀರಾತುಗಳು ತಪ್ಪು ಮಾಹಿತಿಯನ್ನು ಹರಡಿದೆ ಮತ್ತು ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ವರದಿಯೊಂದು ಉಲ್ಲೇಖಿಸಿದೆ.

“ಈ ಕ್ರಿಮಿಕೀಟಗಳನ್ನು ಸುಡೋಣ”, “ಹಿಂದೂ ರಕ್ತ ಚೆಲ್ಲುತ್ತಿದೆ, ಈ ದಾಳಿಕೋರರನ್ನು ಸುಡಬೇಕು” ಎಂಬಂತಹ ಭಾರತದಲ್ಲಿನ ಮುಸ್ಲಿಮರ ವಿರುದ್ಧ ನಿಂದನೆಗಳನ್ನು ಒಳಗೊಂಡಿರುವ ಜಾಹೀರಾತುಗಳನ್ನು ಫೇಸ್‌ಬುಕ್ ಅನುಮೋದಿಸಿದೆ ಮತ್ತು ಕೆಲ ರಾಜಕೀಯ ನಾಯಕರ ಬಗ್ಗೆ ತಪ್ಪು ಮಾಹಿತಿ ಇರುವ ಜಾಹೀರಾತುಗಳನ್ನು ಕೂಡ ಫೇಸ್‌ಬುಕ್ ಅನುಮೋದಿಸಿದೆ. ಇದಲ್ಲದೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಅನುಮೋದಿಸಿದ ಮತ್ತೊಂದು ಜಾಹೀರಾತಿನಲ್ಲಿ ಪ್ರತಿಪಕ್ಷ ನಾಯಕನ ಮರಣದಂಡನೆಗೆ ಕರೆ ನೀಡಲಾಗಿತ್ತು. ಅದರಲ್ಲಿ ಭಾರತದಿಂದ ಹಿಂದೂಗಳನ್ನು ಅಳಿಸಿಹಾಕುಲು ಅವರು ಬಯಸಿದ್ದಾರೆ ಎಂದು ಸುಳ್ಳಾಗಿ ಬಿಂಬಿಸಲಾಗಿತ್ತು. ಈ ಜಾಹೀರಾತಿನಲ್ಲಿ ಸಂದೇಶದ ಜೊತೆಗೆ ಪಾಕಿಸ್ತಾನ ಧ್ವಜದ ಚಿತ್ರವು ಒಳಗೊಂಡಿತ್ತು.

ಚುನಾವಣಾ ಆಯೋಗದ ನಿರ್ದೇಶನದ ನಂತರ ಬಿಜೆಪಿ ಕರ್ನಾಟಕ ಘಟಕವು ಮುಸ್ಲಿಮರು ಮತ್ತು ಕಾಂಗ್ರೆಸ್‌ ಬಗ್ಗೆ ಹಂಚಿಕೊಂಡಿರುವ ದ್ವೇಷದ ಅನಿಮೇಟೆಡ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್ ಇತ್ತೀಚೆಗೆ ತೆಗೆದುಹಾಕಿದೆ. ಇದರ ಬೆನ್ನಲ್ಲಿ ಈ ವರದಿ ಬಹಿರಂಗಗೊಂಡಿದೆ.

ಇಂಡಿಯಾ ಸಿವಿಲ್ ವಾಚ್ ಇಂಟರ್‌ನ್ಯಾಶನಲ್ (ICWI) ಮತ್ತು ಕಾರ್ಪೋರೇಟ್‌ ಸಂಸ್ಥೆ ‘Ekō’ ಹಾನಿಕಾರಕ ರಾಜಕೀಯ ವಿಷಯವನ್ನು ಪತ್ತೆಹಚ್ಚಲು ಮತ್ತು ನಿರ್ಬಂಧಿಸಲು ಮೆಟಾದ ಜಾಹೀರಾತು ಗ್ರಂಥಾಲಯಕ್ಕೆ ಈ ಜಾಹೀರಾತುಗಳನ್ನು ಸಲ್ಲಿಸಿದೆ. ಎಲ್ಲಾ ಜಾಹೀರಾತುಗಳು ನಿಜವಾದ ದ್ವೇಷದ ಮಾತು ಮತ್ತು ಭಾರತದಲ್ಲಿ ಪ್ರಚಲಿತದಲ್ಲಿರುವ ತಪ್ಪು ಮಾಹಿತಿಯನ್ನು ಆಧರಿಸಿ ರಚಿಸಲಾಗಿದೆ, ಇಂತಹ ತಪ್ಪು ನಿರೂಪಣೆಗಳನ್ನು ವೃದ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಸಾಮರ್ಥ್ಯವನ್ನು ವರದಿಯಲ್ಲಿ ಒತ್ತಿ ಹೇಳಲಾಗಿದೆ.

ಸಂಶೋಧಕರು ಇಂಗ್ಲಿಷ್, ಹಿಂದಿ, ಬೆಂಗಾಲಿ, ಗುಜರಾತಿ ಮತ್ತು ಕನ್ನಡದಲ್ಲಿ 22 ಜಾಹೀರಾತುಗಳನ್ನು ಮೆಟಾಗೆ ಸಲ್ಲಿಸಿದ್ದಾರೆ, ಅದರಲ್ಲಿ 14 ಜಾಹೀರಾತನ್ನು ಅನುಮೋದಿಸಲಾಗಿದೆ. ಇನ್ನೂ ಮೂರು ಜಾಹೀರಾತುಗಳನ್ನು ಸಣ್ಣ ಮಟ್ಟದಲ್ಲಿ ಅನುಮೋದಿಸಲಾಗಿದೆ. ಅನುಮೋದಿತ ಎಲ್ಲಾ ಜಾಹೀರಾತುಗಳಲ್ಲಿ ತಿರುಚಿದ ಚಿತ್ರಗಳನ್ನು ಪತ್ತೆ ಹಚ್ಚಲು ಮೆಟಾ ವಿಫಲವಾಗಿದೆ ಎಂದು ಸಂಶೋಧನೆಯು ಪತ್ತೆ ಹಚ್ಚಿದೆ.

ದ್ವೇಷ ಭಾಷಣದ ಕುರಿತು ಮೆಟಾದ ನೀತಿಯನ್ನು ಉಲ್ಲಂಘಿಸಿದ ಮೋದಿಯ ಬಗೆಗಿನ ಒಂದು ಜಾಹೀರಾತು ಸೇರಿ  ಐದು ಜಾಹೀರಾತುಗಳನ್ನು ತಿರಸ್ಕರಿಸಲಾಗಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡ ಇತರ 14 ಜಾಹೀರಾತುಗಳನ್ನು ಅನುಮೋದಿಸಲಾಗಿದೆ ಎಂದು ವರದಿಯು ತಿಳಿಸಿದೆ.

ಜನಾಂಗೀಯವಾದಿಗಳು ಮತ್ತು ನಿರಂಕುಶವಾದಿಗಳು ಕೆಟ್ಟ ದ್ವೇಷದ ಭಾಷಣವನ್ನು ಹರಡಲು ಸಾಮಾಜಿಕ ಮಾದ್ಯಮ ವೇದಿಕೆಯನ್ನು ಬಳಸಬಹುದೆಂದು ತಿಳಿದಿದ್ದಾರೆ, ಮಸೀದಿಗಳ ಸುಡುವ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಂಸಾತ್ಮಕ ಪಿತೂರಿ ಸಿದ್ಧಾಂತಗಳನ್ನು ಹರಡುತ್ತಾರೆ ಮತ್ತು ಮೆಟಾ ಸಂತೋಷದಿಂದ ಅವರ ಹಣವನ್ನು ತೆಗೆದುಕೊಳ್ಳುತ್ತದೆ, ಯಾವುದೇ ಪ್ರಶ್ನೆಗಳನ್ನು ಕೇಳುವುದಿಲ್ಲ ಸಂಶೋಧನಾ ವರದಿಯು ತಿಳಿಸಿದೆ.

ಮಾನದಂಡಗಳು ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಜಾಹೀರಾತುಗಳು ಸೇರಿದಂತೆ ವಿಷಯವನ್ನು ನಾವು ಕಂಡುಕೊಂಡಾಗ, ಅದರ ರಚನೆಯ ಕಾರ್ಯವಿಧಾನವನ್ನು ಲೆಕ್ಕಿಸದೆ ನಾವು ಅದನ್ನು ತೆಗೆದುಹಾಕುತ್ತೇವೆ ಎಂದು ಮೆಟಾ ಹೇಳಿಕೊಂಡಿದೆ. ಆದರೆ ಮೆಟಾ ತನ್ನ ವೇದಿಕೆಗಳಲ್ಲಿ ಇಸ್ಲಾಮೋಫೋಬಿಯಾವನ್ನು ಹರಡುವುದನ್ನು ತಡೆಯಲು ವಿಫಲವಾಗಿದೆ ಎಂದು ಹಿಂದೆ ಆರೋಪ ಕೇಳಿ ಬಂದಿತ್ತು.

ಈ ನಿರ್ಣಾಯಕ ಚುನಾವಣೆಗಳಲ್ಲಿ ಮೆಟಾ ತನ್ನ ವೇದಿಕೆಯಲ್ಲಿ ದ್ವೇಷದ ಭಾಷಣ ಮತ್ತು ತಪ್ಪು ಮಾಹಿತಿಯನ್ನು ಹರಡುವುದನ್ನು ತಡೆಯಲು ಯೋಜನೆಯನ್ನು ರೂಪಿಸಿಕೊಂಡಿಲ್ಲ, AI ರಚಿತ ಚಿತ್ರಗಳನ್ನು ಪತ್ತೆಹಚ್ಚಲು ವಿಫಲವಾದರೆ ಮೆಟಾವನ್ನು ಹೇಗೆ ನಂಬುವುದು ಎಂದು  Ekō ಸಂಸ್ಥೆಯ ಹಮ್ಮದ್ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...