Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...