Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...