Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...