Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...