Homeಅಂತರಾಷ್ಟ್ರೀಯ‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

‘ಮೆಟಾ’ | ‘ಫೇಸ್‌ಬುಕ್ ಇನ್ಕ್’ ಹೆಸರು ಬದಲಾವಣೆ; ಏನಿದು ಮೆಟಾವರ್ಸ್?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ದಿಗ್ಗಜ ‘ಪೇಸ್‌ಬುಕ್ ಇನ್ಕ್‌’(Facebook Inc) ತನ್ನ ಹೆಸರನ್ನು ‘ಮೆಟಾ’ (Meta) ಎಂದು ಬದಲಾಯಿಸಲಿದೆ ಎಂದು ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜ಼ಕರ್‌ಬರ್ಗ್‌ (Mark Zukerberg) ಪ್ರಕಟಿಸಿದ್ದರೆ. ‘ಮೆಟಾ’ ಸಾಮಾಜಿಕ ಜಾಲತಾಣಗಳನ್ನು ಇನ್ನೊಂದು ಹಂತಕ್ಕೆ ಒಯ್ಯಲಿದೆ ಎಂದು ಅವರು ಹೇಳಿದ್ದಾರೆ.

ಗುರುವಾರ ಡೆವಲಪರ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಅವರು, ಸಾಮಾಜಿಕ ವಿಷಯಗಳ ಜೊತೆಗಿನ ಜಂಜಾಟಗಳಿಂದ ಸಾಕಷ್ಟು ಕಲಿತಿದ್ದೇವೆ. ನಾವು ಕಲಿತಿದ್ದು ಹೊಸ ಅಧ್ಯಾಯ ರೂಪಿಸಲು ನೆರವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 2019ರ ಲೋಕಸಭೆ ಚುನಾವಣೆಯಲ್ಲಿ ಸುಳ್ಳುಸುದ್ದಿಗಳು ಹೆಚ್ಚಾಗಿದ್ದವು: ಫೇಸ್‌ಬುಕ್‌

ತಮ್ಮ ಅಪ್ಲಿಕೇಷನ್‌ಗಳು ಮತ್ತು ಬ್ರಾಂಡ್‌ಗಳ ಹೆಸರುಗಳು ಹಾಗೆಯೆ ಇರಲಿದ್ದು, ಅವುಗಳ ಮಾತೃ ಸಂಸ್ಥೆಯಾದ ‘ಫೇಸ್‌ಬುಕ್ ಇನ್ಕ್‌’ ಹೆಸರಷ್ಟೇ ಬದಲಾಗಲಿದೆ ಎಂದು ಮಾರ್ಕ್‌ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ. ಫೇಸ್‌ಬುಕ್ ಇನ್ಕ್‌ ಅಡಿಯಲ್ಲಿ ಇನ್‌ಸ್ಟಾಗ್ರಾಂ, ಫೇಸ್‌ಬುಕ್, ವಾಟ್ಸಪ್, ಮೆಸೆಂಜರ್‌, ಓಕ್ಲಾಸ್, ವರ್ಕ್‌ಪ್ಲೇಸ್‌, ಪೋರ್ಟಾಲ್, ಡಿಯಮ್ ಬ್ರಾಂಡ್ ಮತ್ತು ಅಪ್ಲಿಕೇಷನ್ ಇವೆ.

“ಜನ ಸಾಮಾನ್ಯರ ಮಧ್ಯೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ತಂತ್ರಜ್ಞಾನ ರೂಪಿಸುವ ಕಂಪನಿ ನಮ್ಮದಾಗಿದೆ. ಈ ಕಾರ್ಯದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹೀಗಾಗಿಯೆ ನಮ್ಮ ಕಂಪನಿ ಜನರ ಸಂಪರ್ಕದ ಕೇಂದ್ರವಾಗಿದ್ದು, ನಾವೆಲ್ಲರೂ ಒಟ್ಟಾಗಿ ಬೃಹತ್‌ ಪ್ರಮಾಣದ ಆರ್ಥಿಕತೆಯನ್ನು ಸೃಷ್ಟಿಸಬಹುದು. ಮುಂದಿನ ಒಂದು ದಶಕದಲ್ಲಿ ಮೆಟಾವರ್ಸ್‌ 100 ಕೋಟಿ ಜನರನ್ನು ತಲುಪಲಿದೆ” ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಏನಿದು ‘ಮೆಟಾವರ್ಸ್’?

‘ಮೆಟಾವಸ್‌’ ಎಂಬ ಪದವನ್ನು ಮೊದಲ ಬಾರಿಗೆ ಅಮೆರಿಕದ ಕಾದಂಬರಿಕಾರ ‘ನೀಲ್ ಸ್ಟೆಫನ್ಸನ್’ ಎನ್ನುವವರು ಮೊದಲ ಬಾರಿಗೆ ಬಳಸಿದ್ದರು. ನೈಜ ಪ್ರಪಂಚದಿಂದ ತಪ್ಪಿಸಿಕೊಳ್ಳುವ ವರ್ಚುವಲ್‌ ಪ್ರಪಂಚದ ಜನರನ್ನು ಉದ್ದೇಶಿಸಿ ಅವರು ಈ ಪದವನ್ನು ಬಳಸಿದ್ದರು. ಇದೇ ಹೆಸರನ್ನು ತನ್ನ ಕಂಪೆನಿಗೆ ಮರುನಾಮಕರಣ ಮಾಡುವುದಾಗಿ ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ಇದನ್ನೂ ಓದಿ: 2023ರವರೆಗೆ ಟ್ರಂಪ್‌ ಖಾತೆ ಬ್ಯಾನ್‌ ವಿಸ್ತರಿಸಿದ ಫೇಸ್‌ಬುಕ್: ಅವಮಾನವೆಂದ ಟ್ರಂಪ್

ಫೇಸ್‌ಬುಕ್ ಇನ್ಕ್‌ ತನ್ನ ‘ಮೆಟಾವರ್ಸ್‌’ ನಿರ್ಮಿಸುವ ಯೋಜನೆಯನ್ನು ಕಳೆದ ತಿಂಗಳು ಬಹಿರಂಗ ಪಡಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೆಟಾವರ್ಸ್‌ ವೇದಿಕೆಯು ಜನರ ಸಂವಹನ, ಕೆಲಸ, ಉತ್ಪನ್ನಗಳಿಗೆ ಮಾರುಕಟ್ಟೆ, ವಿವಿಧ ವಿಷಯಗಳ ಕುರಿತ ರಚನೆ ಅವಕಾಶ ನೀಡಲಿದ್ದು, ಲಕ್ಷಾಂತರ ಮಂದಿಗೆ ಉದ್ಯೋಗ ದೊರಕಿಸಿಕೊಡಲಿದೆ ಎಂದು ಜ಼ಕರ್‌ಬರ್ಗ್‌‌‌ ಹೇಳಿದ್ದಾರೆ.

ವಿಶ್ವದ ಹಲವು ದೇಶಗಳಲ್ಲಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ ವಿರುದ್ಧ ಶಾಸಕಾಂಗದ ಕ್ರಮ ಮತ್ತು ನಿಯಂತ್ರಣವನ್ನು ಎದುರಿಸುತ್ತಿರುವಾಗ ತಮ್ಮ ಕಂಪನಿಗೆ ಹೊಸ ನಾಮಕರಣದ ನಿರ್ಧಾರವನ್ನು ಜ಼ಕರ್‌ಬರ್ಗ್‌‌‌ ಮಾಡಿದ್ದಾರೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...