Homeಮುಖಪುಟ2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

- Advertisement -
- Advertisement -

ಭಾರತದ ಸಾರ್ವತ್ರಿಕ ಚುನಾವಣೆಯ ಕುರಿತು ಸಿಇಒ ಮಾರ್ಕ್ ಝುಕರ್‌ಬರ್ಗ್ ನೀಡಿರುವ ಹೇಳಿಕೆ ಸಂಬಂಧ ಮೆಟಾ ಇಂಡಿಯಾ ಕಂಪನಿ ಕ್ಷಮೆಯಾಚಿಸಿದೆ.

ಕೋವಿಡ್ ನಿಭಾಯಿಸುವಲ್ಲಿ ವಿಫಲವಾದ ಕಾರಣ 2024ರ ಚುನಾವಣೆಯಲ್ಲಿ ಭಾರತದ ಈಗಿನ ಆಡಳಿತ ಪಕ್ಷ ಸೋತಿತು ಎಂದು ಝುಕರ್ ಬರ್ಗ್ ಹೇಳಿದ್ದರು.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ತುಕ್ರಾಲ್ ಮಂಗಳವಾರ (ಜ.14) ಕ್ಷಮೆಯಾಚಿಸಿದ್ದು, ಝುಕರ್‌ಬರ್ಗ್ ಅವರ ಹೇಳಿಕೆಯನ್ನು ‘ವಾಸ್ತವಿಕವಾಗಿ ತಪ್ಪು’ ಎಂದು ಕರೆದಿದ್ದಾರೆ.

“2024ರ ಚುನಾವಣೆಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಮರು ಆಯ್ಕೆಯಾಗಿಲ್ಲ ಎಂಬ ಮಾರ್ಕ್ ಅವರ ಅಭಿಪ್ರಾಯವು ಹಲವಾರು ದೇಶಗಳಲ್ಲಿ ನಿಜವಾಗಿದೆ. ಆದರೆ, ಆದರೆ ಭಾರತದಲ್ಲಿ ಅಲ್ಲ”

“ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತುಕ್ರಾಲ್ ಸಚಿವ ವೈಷ್ಣವ್ ಅವರ ಪೋಸ್ಟ್‌ಗೆ ಕಾಮೆಂಟ್ ಆಗಿ ಬರೆದಿದ್ದಾರೆ.

ಜೋ ರೋಗನ್ ಅವರೊಂದಿಗಿನ ಪಾಡ್‌ಕಾಸ್ಟ್‌ನಲ್ಲಿ ಝುಕರ್‌ಬರ್ಗ್ ಅವರು ”
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಜಾಗತಿಕವಾಗಿ ಇರುವ ಅಸಮಾಧಾನಕ್ಕೆ ಭಾರತ ಒಂದು ಉದಾಹರಣೆ ಎಂದು ಹೇಳಿದ್ದರು. ಕೋವಿಡ್ ನಂತರ ನಡೆದ ಚುನಾವಣೆಗಳಲ್ಲಿ ಭಾರತದಲ್ಲಿ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಸೋತವು” ಎಂದಿದ್ದರು.

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ನೇತೃತ್ವ ವಹಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಝುಕರ್‌ಬರ್ಗ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ತಂಡ ಮೆಟಾಗೆ ಸಮನ್ಸ್ ಜಾರಿ ಮಾಡಲಿದೆ ಎಂದು ಮಂಗಳವಾರ ಹೇಳಿದ್ದರು.

“ಈ ತಪ್ಪಿಗಾಗಿ ಮೆಟಾ ಭಾರತೀಯ ಸಂಸತ್ತು ಮತ್ತು ಈ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಆಗ್ರಹಿಸಿದ್ದರು.

ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಭಾರತವು 2024 ರ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಭಾರತದ ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಮೇಲೆ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ್ದಾರೆ”

“2024ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತವು ಎಂಬ ಝುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ” ಎಂದಿದ್ದರು.

“800 ಮಿಲಿಯನ್ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ಕೋವಿಡ್ ಸಮಯದಲ್ಲಿ ವಿಶ್ವದಾದ್ಯಂತ ರಾಷ್ಟ್ರಗಳಿಗೆ ಸಹಾಯದಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಬರೆದುಕೊಂಡಿದ್ದರು.

“ಝುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿಯನ್ನು ನೋಡುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದಿದ್ದರು.

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...