Homeಮುಖಪುಟ2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

- Advertisement -
- Advertisement -

ಭಾರತದ ಸಾರ್ವತ್ರಿಕ ಚುನಾವಣೆಯ ಕುರಿತು ಸಿಇಒ ಮಾರ್ಕ್ ಝುಕರ್‌ಬರ್ಗ್ ನೀಡಿರುವ ಹೇಳಿಕೆ ಸಂಬಂಧ ಮೆಟಾ ಇಂಡಿಯಾ ಕಂಪನಿ ಕ್ಷಮೆಯಾಚಿಸಿದೆ.

ಕೋವಿಡ್ ನಿಭಾಯಿಸುವಲ್ಲಿ ವಿಫಲವಾದ ಕಾರಣ 2024ರ ಚುನಾವಣೆಯಲ್ಲಿ ಭಾರತದ ಈಗಿನ ಆಡಳಿತ ಪಕ್ಷ ಸೋತಿತು ಎಂದು ಝುಕರ್ ಬರ್ಗ್ ಹೇಳಿದ್ದರು.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ತುಕ್ರಾಲ್ ಮಂಗಳವಾರ (ಜ.14) ಕ್ಷಮೆಯಾಚಿಸಿದ್ದು, ಝುಕರ್‌ಬರ್ಗ್ ಅವರ ಹೇಳಿಕೆಯನ್ನು ‘ವಾಸ್ತವಿಕವಾಗಿ ತಪ್ಪು’ ಎಂದು ಕರೆದಿದ್ದಾರೆ.

“2024ರ ಚುನಾವಣೆಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಮರು ಆಯ್ಕೆಯಾಗಿಲ್ಲ ಎಂಬ ಮಾರ್ಕ್ ಅವರ ಅಭಿಪ್ರಾಯವು ಹಲವಾರು ದೇಶಗಳಲ್ಲಿ ನಿಜವಾಗಿದೆ. ಆದರೆ, ಆದರೆ ಭಾರತದಲ್ಲಿ ಅಲ್ಲ”

“ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತುಕ್ರಾಲ್ ಸಚಿವ ವೈಷ್ಣವ್ ಅವರ ಪೋಸ್ಟ್‌ಗೆ ಕಾಮೆಂಟ್ ಆಗಿ ಬರೆದಿದ್ದಾರೆ.

ಜೋ ರೋಗನ್ ಅವರೊಂದಿಗಿನ ಪಾಡ್‌ಕಾಸ್ಟ್‌ನಲ್ಲಿ ಝುಕರ್‌ಬರ್ಗ್ ಅವರು ”
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಜಾಗತಿಕವಾಗಿ ಇರುವ ಅಸಮಾಧಾನಕ್ಕೆ ಭಾರತ ಒಂದು ಉದಾಹರಣೆ ಎಂದು ಹೇಳಿದ್ದರು. ಕೋವಿಡ್ ನಂತರ ನಡೆದ ಚುನಾವಣೆಗಳಲ್ಲಿ ಭಾರತದಲ್ಲಿ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಸೋತವು” ಎಂದಿದ್ದರು.

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ನೇತೃತ್ವ ವಹಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಝುಕರ್‌ಬರ್ಗ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ತಂಡ ಮೆಟಾಗೆ ಸಮನ್ಸ್ ಜಾರಿ ಮಾಡಲಿದೆ ಎಂದು ಮಂಗಳವಾರ ಹೇಳಿದ್ದರು.

“ಈ ತಪ್ಪಿಗಾಗಿ ಮೆಟಾ ಭಾರತೀಯ ಸಂಸತ್ತು ಮತ್ತು ಈ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಆಗ್ರಹಿಸಿದ್ದರು.

ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಭಾರತವು 2024 ರ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಭಾರತದ ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಮೇಲೆ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ್ದಾರೆ”

“2024ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತವು ಎಂಬ ಝುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ” ಎಂದಿದ್ದರು.

“800 ಮಿಲಿಯನ್ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ಕೋವಿಡ್ ಸಮಯದಲ್ಲಿ ವಿಶ್ವದಾದ್ಯಂತ ರಾಷ್ಟ್ರಗಳಿಗೆ ಸಹಾಯದಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಬರೆದುಕೊಂಡಿದ್ದರು.

“ಝುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿಯನ್ನು ನೋಡುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದಿದ್ದರು.

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...