Homeಮುಖಪುಟ2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

2024ರ ಭಾರತದ ಸಾರ್ವತ್ರಿಕ ಚುನಾವಣೆ ಕುರಿತ ಝುಕರ್ ಬರ್ಗ್ ಹೇಳಿಕೆ : ಕ್ಷಮೆಯಾಚಿಸಿದ ಮೆಟಾ

- Advertisement -
- Advertisement -

ಭಾರತದ ಸಾರ್ವತ್ರಿಕ ಚುನಾವಣೆಯ ಕುರಿತು ಸಿಇಒ ಮಾರ್ಕ್ ಝುಕರ್‌ಬರ್ಗ್ ನೀಡಿರುವ ಹೇಳಿಕೆ ಸಂಬಂಧ ಮೆಟಾ ಇಂಡಿಯಾ ಕಂಪನಿ ಕ್ಷಮೆಯಾಚಿಸಿದೆ.

ಕೋವಿಡ್ ನಿಭಾಯಿಸುವಲ್ಲಿ ವಿಫಲವಾದ ಕಾರಣ 2024ರ ಚುನಾವಣೆಯಲ್ಲಿ ಭಾರತದ ಈಗಿನ ಆಡಳಿತ ಪಕ್ಷ ಸೋತಿತು ಎಂದು ಝುಕರ್ ಬರ್ಗ್ ಹೇಳಿದ್ದರು.

ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರ ಎಕ್ಸ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಮೆಟಾ ಇಂಡಿಯಾದ ಉಪಾಧ್ಯಕ್ಷ ಶಿವನಾಥ್ ತುಕ್ರಾಲ್ ಮಂಗಳವಾರ (ಜ.14) ಕ್ಷಮೆಯಾಚಿಸಿದ್ದು, ಝುಕರ್‌ಬರ್ಗ್ ಅವರ ಹೇಳಿಕೆಯನ್ನು ‘ವಾಸ್ತವಿಕವಾಗಿ ತಪ್ಪು’ ಎಂದು ಕರೆದಿದ್ದಾರೆ.

“2024ರ ಚುನಾವಣೆಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಮರು ಆಯ್ಕೆಯಾಗಿಲ್ಲ ಎಂಬ ಮಾರ್ಕ್ ಅವರ ಅಭಿಪ್ರಾಯವು ಹಲವಾರು ದೇಶಗಳಲ್ಲಿ ನಿಜವಾಗಿದೆ. ಆದರೆ, ಆದರೆ ಭಾರತದಲ್ಲಿ ಅಲ್ಲ”

“ಈ ಅಜಾಗರೂಕ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತುಕ್ರಾಲ್ ಸಚಿವ ವೈಷ್ಣವ್ ಅವರ ಪೋಸ್ಟ್‌ಗೆ ಕಾಮೆಂಟ್ ಆಗಿ ಬರೆದಿದ್ದಾರೆ.

ಜೋ ರೋಗನ್ ಅವರೊಂದಿಗಿನ ಪಾಡ್‌ಕಾಸ್ಟ್‌ನಲ್ಲಿ ಝುಕರ್‌ಬರ್ಗ್ ಅವರು ”
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಜಾಗತಿಕವಾಗಿ ಇರುವ ಅಸಮಾಧಾನಕ್ಕೆ ಭಾರತ ಒಂದು ಉದಾಹರಣೆ ಎಂದು ಹೇಳಿದ್ದರು. ಕೋವಿಡ್ ನಂತರ ನಡೆದ ಚುನಾವಣೆಗಳಲ್ಲಿ ಭಾರತದಲ್ಲಿ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿದ್ದ ಪಕ್ಷಗಳು ಸೋತವು” ಎಂದಿದ್ದರು.

ಸಂವಹನ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ನೇತೃತ್ವ ವಹಿಸಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ನಿಶಿಕಾಂತ್ ದುಬೆ ಅವರು ಝುಕರ್‌ಬರ್ಗ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ತಂಡ ಮೆಟಾಗೆ ಸಮನ್ಸ್ ಜಾರಿ ಮಾಡಲಿದೆ ಎಂದು ಮಂಗಳವಾರ ಹೇಳಿದ್ದರು.

“ಈ ತಪ್ಪಿಗಾಗಿ ಮೆಟಾ ಭಾರತೀಯ ಸಂಸತ್ತು ಮತ್ತು ಈ ದೇಶದ ಜನರಲ್ಲಿ ಕ್ಷಮೆಯಾಚಿಸಬೇಕು” ಎಂದು ದುಬೆ ಆಗ್ರಹಿಸಿದ್ದರು.

ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯಿಸಿ “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ, ಭಾರತವು 2024 ರ ಚುನಾವಣೆಯನ್ನು 640 ಮಿಲಿಯನ್‌ಗಿಂತಲೂ ಹೆಚ್ಚು ಮತದಾರರೊಂದಿಗೆ ನಡೆಸಿತು. ಭಾರತದ ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಎನ್‌ಡಿಎ ಮೇಲೆ ತಮ್ಮ ನಂಬಿಕೆಯನ್ನು ಪುನರುಚ್ಚರಿಸಿದ್ದಾರೆ”

“2024ರ ಚುನಾವಣೆಗಳಲ್ಲಿ ಭಾರತ ಸೇರಿದಂತೆ ಹೆಚ್ಚಿನ ದೇಶಗಳಲ್ಲಿ ಅಧಿಕಾರದಲ್ಲಿರುವ ಸರ್ಕಾರಗಳು ಕೋವಿಡ್ ನಂತರ ಸೋತವು ಎಂಬ ಝುಕರ್‌ಬರ್ಗ್ ಅವರ ಹೇಳಿಕೆ ವಾಸ್ತವಿಕವಾಗಿ ತಪ್ಪಾಗಿದೆ” ಎಂದಿದ್ದರು.

“800 ಮಿಲಿಯನ್ ಜನರಿಗೆ ಉಚಿತ ಆಹಾರ, 2.2 ಬಿಲಿಯನ್ ಉಚಿತ ಲಸಿಕೆಗಳು ಮತ್ತು ಕೋವಿಡ್ ಸಮಯದಲ್ಲಿ ವಿಶ್ವದಾದ್ಯಂತ ರಾಷ್ಟ್ರಗಳಿಗೆ ಸಹಾಯದಿಂದ ಹಿಡಿದು, ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುನ್ನಡೆಸುವವರೆಗೆ, ಪ್ರಧಾನಿ ಮೋದಿಯವರ ನಿರ್ಣಾಯಕ 3ನೇ ಅವಧಿಯ ಗೆಲುವು ಉತ್ತಮ ಆಡಳಿತ ಮತ್ತು ಸಾರ್ವಜನಿಕ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಬರೆದುಕೊಂಡಿದ್ದರು.

“ಝುಕರ್‌ಬರ್ಗ್ ಅವರಿಂದಲೇ ತಪ್ಪು ಮಾಹಿತಿಯನ್ನು ನೋಡುವುದು ನಿರಾಶಾದಾಯಕವಾಗಿದೆ. ಸತ್ಯ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿಯೋಣ” ಎಂದಿದ್ದರು.

ಲೋಕಸಭೆ 2024ರ ಚುನಾವಣೆ ಸೋಲಿನ ಬಗ್ಗೆ ಜುಕರ್‌ಬರ್ಗ್ ಹೇಳಿಕೆ – ಭಾರತದ ವರ್ಚಸ್ಸಿಗೆ ಧಕ್ಕೆ ಎಂದ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...