Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...