Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...