Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...