Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...